<p><strong>ಕಲಬುರ್ಗಿ:</strong> ವೇತನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರಕ್ಕೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಸೇವೆಯಿಂದ ವಜಾದಂತಹ ಕಠಿಣ ಕ್ರಮಗಳ ಬಳಿಕ ಬೆದರಿದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.</p>.<p>ಮುಷ್ಕರವು ಭಾನುವಾರ 12ನೇ ದಿನಕ್ಕೆ ಕಾಲಿರಿಸಿದ್ದು, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ 1229 ಬಸ್ಗಳು ಸಂಚರಿಸಿದವು.</p>.<p>ಏಪ್ರಿಲ್ 15ರಂದು ಬೀದರ್ ಜಿಲ್ಲೆಯ ಹುಮನಾಬಾದ್ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್ ತಡೆಹಿಡಿದು ಸಂಚಾರಕ್ಕೆ ಅಡ್ಡಿಪಡಿಸಿದ ಮುಷ್ಕರ ನಿರತ ಚಾಲಕ ರಾಜು ಎಂಬುವವರ ವಿರುದ್ಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.</p>.<p>ಕಲಬುರ್ಗಿ ಬಸ್ ನಿಲ್ದಾಣದಿಂದ ಭಾನುವಾರವೂ ಬಹುತೇಕ ಖಾಸಗಿ ಬಸ್ಗಳು ಸಂಚಾರ ನಡೆಸಿದವು. ಸಂಸ್ಥೆಯ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ 5ರವರೆಗೆ 226 ಖಾಸಗಿ ಬಸ್, 163 ಬೇರೆ ರಾಜ್ಯಗಳ ಬಸ್, 1491 ಇತರೆ ವಾಹನಗಳು ಸಂಚಾರ ನಡೆಸಿದವು ಎಂದು ಅವರು ತಿಳಿಸಿದ್ದಾರೆ.</p>.<p>ಸತತ ಮನವಿಯ ಬಳಿಕವೂ ಬಹುತೇಕ ಸಿಬ್ಬಂದಿ ಕರ್ತವ್ಯದಿಂದ ದೂರವೇ ಉಳಿದಿದ್ದು, ಕೆಲವರನ್ನು ಬೇರೆ ಘಟಕಗಳಿಗೆ ವರ್ಗಾಯಿಸಲಾಗಿದೆ. ಕೆಲವರನ್ನು ವಜಾ ಮಾಡಲಾಗಿದೆ. ಆದರೂ, ನಮ್ಮ ಮನವಿಗೆ ಸ್ಪಂದಿಸ ದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.</p>.<p class="Subhead"><strong>₹ 59 ಕೋಟಿ ಆದಾಯ ನಷ್ಟ:</strong> ಮುಷ್ಕರ ಆರಂಭವಾದ ಏಪ್ರಿಲ್ 7ರಿಂದ ಏ 18ರವರೆಗೆ ಸಂಸ್ಥೆಯ ಆದಾಯದಲ್ಲಿ ₹ 59 ಕೋಟಿ ಆದಾಯ ನಷ್ಟವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಉದ್ಯೋಗಕ್ಕಾಗಿ ತೆರಳುವವರಿಗೆ ಬಸ್ ಬಂದ್ ಆಗಿದ್ದರಿಂದ ಸಾಕಷ್ಟು ತೊಂದರೆಯಾಗಿದ್ದು, ದುಪ್ಪಟ್ಟು ದರ ನೀಡಿ ಪ್ರಯಾಣಿಸಬೇಕಾಗಿದೆ.</p>.<p>‘ಸರ್ಕಾರವೇ ಖಾಸಗಿ ವಾಹನ ಮಾಲೀಕರ ಸುಲಿಗೆಗೆ ಮುಕ್ತ ಆಹ್ವಾನ ನೀಡಿದಂತಾಗಿದೆ. ನಿರಂತರವಾಗಿ ಆರ್ಟಿಒ ಹಾಗೂ ಪೊಲೀಸ್ ಸಿಬ್ಬಂದಿ ಪ್ರಯಾಣ ದರದ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಖಾಸಗಿಯವರ ಸುಲಿಗೆಗೆ ಕೊನೆಯೇ ಇಲ್ಲದಂತಾಗುತ್ತದೆ’ ಎಂದು ಬ್ಯಾಂಕ್ ಉದ್ಯೋಗಿ ಸಂಜೀವಕುಮಾರ್ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದರು.</p>.<p class="Subhead"><strong>ಆಟೊಗಳಿಂದಲೂ ಸುಲಿಗೆ: </strong>ಪರಿಸ್ಥಿತಿಯ ದುರುಪಯೋಗ ಪಡಿಸಿಕೊಳ್ಳುತ್ತಿರುವ ಆಟೊ ಚಾಲಕರೂ ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಿದ್ದು, ಅವರ ಮೇಲೆಯೂ ನಿಯಂತ್ರಣ ಹೇರಬೇಕು ಎಂದು ಜೇವರ್ಗಿ ಕಾಲೊನಿ ನಿವಾಸಿ ಜಗನ್ನಾಥ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ವೇತನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರಕ್ಕೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಸೇವೆಯಿಂದ ವಜಾದಂತಹ ಕಠಿಣ ಕ್ರಮಗಳ ಬಳಿಕ ಬೆದರಿದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.</p>.<p>ಮುಷ್ಕರವು ಭಾನುವಾರ 12ನೇ ದಿನಕ್ಕೆ ಕಾಲಿರಿಸಿದ್ದು, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ 1229 ಬಸ್ಗಳು ಸಂಚರಿಸಿದವು.</p>.<p>ಏಪ್ರಿಲ್ 15ರಂದು ಬೀದರ್ ಜಿಲ್ಲೆಯ ಹುಮನಾಬಾದ್ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್ ತಡೆಹಿಡಿದು ಸಂಚಾರಕ್ಕೆ ಅಡ್ಡಿಪಡಿಸಿದ ಮುಷ್ಕರ ನಿರತ ಚಾಲಕ ರಾಜು ಎಂಬುವವರ ವಿರುದ್ಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.</p>.<p>ಕಲಬುರ್ಗಿ ಬಸ್ ನಿಲ್ದಾಣದಿಂದ ಭಾನುವಾರವೂ ಬಹುತೇಕ ಖಾಸಗಿ ಬಸ್ಗಳು ಸಂಚಾರ ನಡೆಸಿದವು. ಸಂಸ್ಥೆಯ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ 5ರವರೆಗೆ 226 ಖಾಸಗಿ ಬಸ್, 163 ಬೇರೆ ರಾಜ್ಯಗಳ ಬಸ್, 1491 ಇತರೆ ವಾಹನಗಳು ಸಂಚಾರ ನಡೆಸಿದವು ಎಂದು ಅವರು ತಿಳಿಸಿದ್ದಾರೆ.</p>.<p>ಸತತ ಮನವಿಯ ಬಳಿಕವೂ ಬಹುತೇಕ ಸಿಬ್ಬಂದಿ ಕರ್ತವ್ಯದಿಂದ ದೂರವೇ ಉಳಿದಿದ್ದು, ಕೆಲವರನ್ನು ಬೇರೆ ಘಟಕಗಳಿಗೆ ವರ್ಗಾಯಿಸಲಾಗಿದೆ. ಕೆಲವರನ್ನು ವಜಾ ಮಾಡಲಾಗಿದೆ. ಆದರೂ, ನಮ್ಮ ಮನವಿಗೆ ಸ್ಪಂದಿಸ ದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.</p>.<p class="Subhead"><strong>₹ 59 ಕೋಟಿ ಆದಾಯ ನಷ್ಟ:</strong> ಮುಷ್ಕರ ಆರಂಭವಾದ ಏಪ್ರಿಲ್ 7ರಿಂದ ಏ 18ರವರೆಗೆ ಸಂಸ್ಥೆಯ ಆದಾಯದಲ್ಲಿ ₹ 59 ಕೋಟಿ ಆದಾಯ ನಷ್ಟವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಉದ್ಯೋಗಕ್ಕಾಗಿ ತೆರಳುವವರಿಗೆ ಬಸ್ ಬಂದ್ ಆಗಿದ್ದರಿಂದ ಸಾಕಷ್ಟು ತೊಂದರೆಯಾಗಿದ್ದು, ದುಪ್ಪಟ್ಟು ದರ ನೀಡಿ ಪ್ರಯಾಣಿಸಬೇಕಾಗಿದೆ.</p>.<p>‘ಸರ್ಕಾರವೇ ಖಾಸಗಿ ವಾಹನ ಮಾಲೀಕರ ಸುಲಿಗೆಗೆ ಮುಕ್ತ ಆಹ್ವಾನ ನೀಡಿದಂತಾಗಿದೆ. ನಿರಂತರವಾಗಿ ಆರ್ಟಿಒ ಹಾಗೂ ಪೊಲೀಸ್ ಸಿಬ್ಬಂದಿ ಪ್ರಯಾಣ ದರದ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಖಾಸಗಿಯವರ ಸುಲಿಗೆಗೆ ಕೊನೆಯೇ ಇಲ್ಲದಂತಾಗುತ್ತದೆ’ ಎಂದು ಬ್ಯಾಂಕ್ ಉದ್ಯೋಗಿ ಸಂಜೀವಕುಮಾರ್ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದರು.</p>.<p class="Subhead"><strong>ಆಟೊಗಳಿಂದಲೂ ಸುಲಿಗೆ: </strong>ಪರಿಸ್ಥಿತಿಯ ದುರುಪಯೋಗ ಪಡಿಸಿಕೊಳ್ಳುತ್ತಿರುವ ಆಟೊ ಚಾಲಕರೂ ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಿದ್ದು, ಅವರ ಮೇಲೆಯೂ ನಿಯಂತ್ರಣ ಹೇರಬೇಕು ಎಂದು ಜೇವರ್ಗಿ ಕಾಲೊನಿ ನಿವಾಸಿ ಜಗನ್ನಾಥ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>