ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಸಂಘಕ್ಕೆ 12ರಂದು ಚುನಾವಣೆ:13 ಮಂದಿ ನಾಮಪತ್ರ ಸಲ್ಲಿಕೆ

Published 6 ಅಕ್ಟೋಬರ್ 2023, 15:52 IST
Last Updated 6 ಅಕ್ಟೋಬರ್ 2023, 15:52 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕು ವಕೀಲರ ಸಂಘಕ್ಕೆ ಅಕ್ಟೋಬರ್‌ 12ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರದ ಅಂತ್ಯಕ್ಕೆ ಒಟ್ಟು 13 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಹಿರಿಯ ವಕೀಲ ವಿಶ್ವನಾಥ ಬೆನಕಿನ್ ತಿಳಿಸಿದರು.

‘ಅಧ್ಯಕ್ಷ ಸ್ಥಾನಕ್ಕೆ ನಾಗಭೂಷಣ ಹುಲಗುಂಡಿ, ಶ್ರೀಮಂತ ಕಟ್ಟಿಮನಿ, ಸಂಜೀವಕುಮಾರ ಮೇತ್ರಿ, ರಾಜೇಂದ್ರಕುಮಾರ ವರ್ಮಾ, ಸುದರ್ಶನ ಬಿರಾದಾರ, ನಂದಿಕುಮಾರ ಪಾಟೀಲ, ಉಪಾಧ್ಯಕ್ಷ ಸ್ಥಾನಕ್ಕೆ ಎ.ಎಸ್ ಹೆಗಡೆ, ಜಗನ್ನಾಥ ಗಂಜಗಿರಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಗುಂಡಪ್ಪ ಗೋಖಲೆ, ನೀಲಾ ಎಸ್. ರಾಠೋಡ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸುದರ್ಶನ ಸಂತಾಳ, ಮಾಣಿಕರಾವ್ ಅಣವಾರಕರ್, ಖಜಾಂಚಿ ಸ್ಥಾನಕ್ಕೆ ಪ್ರವೀಣಕುಮಾರ ನಮ್ಲಿಕರ್ ನಾಮಪತ್ರ ಸಲ್ಲಿಸಿದ್ದಾರೆ’ ಎಂದರು.

ಅಧ್ಯಕ್ಷ ಸ್ಥಾನಕ್ಕೆಆರು, ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಹಾಗೂ ಖಜಾಂಚಿ ಸ್ಥಾನಕ್ಕೆ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಖಜಾಂಚಿ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ. ಪರಿಶೀಲನೆ ನಂತರ ಅಧಿಕೃತವಾಗಿ ಘೋಷಿಸಲಾಗುವುದು. ಒಟ್ಟು 5 ಜನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

ಸಹಾಯಕ ಚುನಾವಣಾಧಿಕಾರಿಗಳಾದ ಚಂದ್ರಶೆಟ್ಟಿ ಜಾಧವ ಮತ್ತು ಚಂದ್ರಶೇಖರ ಮಲಸಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT