ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮೇಶ ಜಾಧವ ಕಾಂಗ್ರೆಸ್‌ ತೊರೆಯಲು ಕಾರಣವಾಗಿದ್ದ ರಸ್ತೆಗೆ ಈಗ ಭಾಗ್ಯ!

ರಾಜ್ಯ ಹೆದ್ದಾರಿ ಸುಧಾರಣೆಗೆ ₹15 ಕೋಟಿ
Last Updated 22 ನವೆಂಬರ್ 2019, 9:49 IST
ಅಕ್ಷರ ಗಾತ್ರ

ಚಿಂಚೋಳಿ: ಶಾಸಕರಾ ಗಿದ್ದ ಡಾ.ಉಮೇಶ ಜಾಧವ ಕಾಂಗ್ರೆಸ್‌ ಪಕ್ಷದ ಮೇಲೆ ಮುನಿಸಿಕೊಳ್ಳಲು ಕಾರಣವಾಗಿದ್ದ ರಾಜ್ಯ ಹೆದ್ದಾರಿ 125ರ ಸುಧಾರಣೆ ಕಾಮಗಾರಿಗೆ ಬಿಜೆಪಿ ಸರ್ಕಾರ ಅನುಮೋದನೆ ನೀಡಿದೆ.

ಕಮಲಾಪುರ– ಫಿರೋಜಾಬಾದ್ ರಾಜ್ಯ ಹೆದ್ದಾರಿ 125ಕ್ಕೆ ಸೇರಿದ ತಾಲ್ಲೂಕಿನ ಚಂದನಕೇರಾ– ಚೇಂಗಟಾ ಮಾರ್ಗದಲ್ಲಿ ಬರುವ ಸುಮಾರು 11 ಕಿ.ಮೀ ಉದ್ದ ಮತ್ತು 7 ಮೀಟರ್‌ ಅಗಲದ ರಸ್ತೆಯನ್ನು ನಿರ್ಮಿಸಲು ₹15 ಕೋಟಿ ವೆಚ್ಚದ ಕಾಮಗಾರಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

2017–18ರಲ್ಲಿ ಮಂಜೂರಾಗಿದ್ದ ರಸ್ತೆ ಕಾಮಗಾರಿಗೆ ಅದೇ ವರ್ಷಟೆಂಡರ್‌ ಕರೆಯಲಾಗಿತ್ತು. ನಂತರ ವಿಧಾನಸಭೆ ಚುನಾವಣೆ ಎದುರಾಗಿದ್ದರಿಂದ ಟೆಂಡರ್‌ ಅಂತಿಮಗೊಂಡಿರಲಿಲ್ಲ. ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್‌– ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಲವು ಬಾರಿ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಕಾಮಗಾರಿಗೆ ಅನುಮೋದನೆ ನೀಡಿಲ್ಲ ಎಂದು ಉಮೇಶ ಜಾಧವ ಹಲವು ಬಾರಿ ಅಸಮಾಧಾನ ತೋಡಿಕೊಂಡಿದ್ದರು. ಇದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿತ್ತು.

ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರ ಸರ್ಕಾರ ಯೋಜನೆಗೆ ಅನುಮೋದನೆ ನೀಡಿದೆ.15 ದಿನಗಳ ಹಿಂದೆ ಕಾಮಗಾರಿ ಆರಂಭಕ್ಕೆ ಒಪ್ಪಿಗೆ ಸಿಕ್ಕಿದೆ. ಗುತ್ತಿಗೆ ಸಂಸ್ಥೆಯ ಜತೆಗೆ ಒಪ್ಪಂದವೂ ಮಾಡಿಕೊಳ್ಳಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT