2017–18ರಲ್ಲಿ ಮಂಜೂರಾಗಿದ್ದ ರಸ್ತೆ ಕಾಮಗಾರಿಗೆ ಅದೇ ವರ್ಷಟೆಂಡರ್ ಕರೆಯಲಾಗಿತ್ತು. ನಂತರ ವಿಧಾನಸಭೆ ಚುನಾವಣೆ ಎದುರಾಗಿದ್ದರಿಂದ ಟೆಂಡರ್ ಅಂತಿಮಗೊಂಡಿರಲಿಲ್ಲ. ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಲವು ಬಾರಿ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಕಾಮಗಾರಿಗೆ ಅನುಮೋದನೆ ನೀಡಿಲ್ಲ ಎಂದು ಉಮೇಶ ಜಾಧವ ಹಲವು ಬಾರಿ ಅಸಮಾಧಾನ ತೋಡಿಕೊಂಡಿದ್ದರು. ಇದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿತ್ತು.