ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದುದರಿಂದ ಅಲ್ಲಿಂದ ಜಿಲ್ಲೆಗೆ ಬರುವವರ ಕೋವಿಡ್ ದಾಖಲೆಗಳನ್ನು ಪರಿಶೀಲಿಸಲು ಗ್ರಾಮ ಲೆಕ್ಕಾಧಿಕಾರಿ ರವೀಂದ್ರ ಮತ್ತು ಹಿರಿಯ ಆರೋಗ್ಯ ಸಹಾಯಕ ರೇವಣಸಿದ್ದ ಅವರನ್ನು ನಿಯೋಜಿಸಲಾಗಿತ್ತು. ಆದರೆ ಚೆಕ್ಪೋಸ್ಟ್ಗೆ ಹೋಗದೇ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜೋತ್ಸ್ನಾ ತಿಳಿಸಿದ್ದಾರೆ.