ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಆಸಕ್ತಿ ವಹಿಸಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಮಾಡಲು ಮುಂದಾಗಿದ್ದಾರೆ. ಅವರ ಈ ಕ್ರಮವನ್ನು ಕೆಎಸ್ಸಿಎ ಸ್ವಾಗತಿಸುತ್ತದೆ. ಇದರಿಂದಾಗಿ ಈ ಭಾಗದ ಕ್ರಿಕೆಟ್ ಪಟುಗಳಿಗೆ ಸಾಕಷ್ಟು ಪ್ರೋತ್ಸಾಹ ದೊರೆತಂತಾಗುತ್ತದೆ’ ಎಂದರು.