<p><strong>ಕಮಲಾಪುರ: </strong>‘ತಾಲ್ಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರ ಕುಟುಂಬಗಳಿಗೂ ತಲಾ ₹ 3 ಲಕ್ಷ ಪರಿಹಾರ ನೀಡಬೇಕು’ ಎಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ವಿಜಯನಗರ ಜಿಲ್ಲೆಯ ಹುವಿನಹಡಗಿಲಿ ಸಮೀಪದ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇಂಥದ್ದೇ ಪ್ರಕರಣದಲ್ಲಿ ದಸ್ತಾಪುರದಲ್ಲಿ ಸೆ. 29ರಂದು ದ್ರೌಪದಿ (65) ಹಾಗೂ ಕಮಲಾಬಾಯಿ (56) ಮೃತಪಟ್ಟಿದ್ದರೂ ಪ್ರತಿಕ್ರಿಯೆ ಕೂಡ ನೀಡಿಲ್ಲ. ಮಾತ್ರವಲ್ಲ; ಈವರೆಗೆ 50 ಮಂದಿ ವಾಂತಿ– ಭೇದಿಯಿಂದ ನರಳಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ವೈಯಕ್ತಿಕ ನೆರವು ನೀಡುವುದಾಗಿ ಶಾಸಕ ಬಸವರಾಜ ಮತ್ತಿಮೂಡ ಹೇಳಿದ್ದಾರೆ. ಆದರೆ, ಇನ್ನೂ ಪರಿಹಾರ ಬಂದಿಲ್ಲ. ಕನಿಷ್ಠಪಕ್ಷ ಸರ್ಕಾರದ ನೆವನ್ನಾದರೂ ಕೂಡಲೇ ನೀಡಬೇಕು’ ಎಂದು ಗ್ರಾಮದ ಮುಖಂಡ ಧೂಳಪ್ಪ ಕಮಲಾಪುರಕರ್ ಆಗ್ರಹಿಸಿದ್ದಾರೆ.</p>.<p>‘ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡಬಾರದು. ದಸ್ತಾಪುರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಕೂಡ ಪರಿಹಾರದ ಬಗ್ಗೆ ನಿಖರ ಮಾಹಿತಿ ನೀಡಿಲ್ಲ. ಏನು ಬರುತ್ತದೋ ಅದನ್ನು ಕೊಡಿಸಲು ಯತ್ನಿಸುತ್ತೇನೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿಯೇ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆಂದರೆ ಅದೇ ರೀತಿಯ ಪರಿಹಾರವನ್ನೂ ಇಲ್ಲೂ ನೀಡಲು ಅಧಿಕಾರಿಗಳು ಏಕೆ ಹಿಂದೇಟು ಹಾಕಬೇಕು’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p>‘ದಸ್ತಾಪುರದಲ್ಲಿ ಈಗಲೂ ವಾಂತಿ ಭೇದಿ ಪ್ರಕರಣಗಳು ಮುಂದುವರಿದಿವೆ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕವಾಗಿ ನೀರಿನ ಡಬ್ಬಗಳನ್ನು ನೀಡಿದ್ದಾರೆ. ಆದರೆ, ಅವು ಯಾರಿಗೂ ಸಾಲುವುದಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಜನರನ್ನು ರೋಗಗಳ ಸಂಕಷ್ಟದಿಂದ ಪಾರು ಮಾಡಬೇಕು’ ಎಂದು ಶಿವರಾಯ ಸೂರನ್ ಅವರುಮುಖ್ಯಮಂತ್ರಿಗಳಿಗೆಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ: </strong>‘ತಾಲ್ಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರ ಕುಟುಂಬಗಳಿಗೂ ತಲಾ ₹ 3 ಲಕ್ಷ ಪರಿಹಾರ ನೀಡಬೇಕು’ ಎಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ವಿಜಯನಗರ ಜಿಲ್ಲೆಯ ಹುವಿನಹಡಗಿಲಿ ಸಮೀಪದ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇಂಥದ್ದೇ ಪ್ರಕರಣದಲ್ಲಿ ದಸ್ತಾಪುರದಲ್ಲಿ ಸೆ. 29ರಂದು ದ್ರೌಪದಿ (65) ಹಾಗೂ ಕಮಲಾಬಾಯಿ (56) ಮೃತಪಟ್ಟಿದ್ದರೂ ಪ್ರತಿಕ್ರಿಯೆ ಕೂಡ ನೀಡಿಲ್ಲ. ಮಾತ್ರವಲ್ಲ; ಈವರೆಗೆ 50 ಮಂದಿ ವಾಂತಿ– ಭೇದಿಯಿಂದ ನರಳಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ವೈಯಕ್ತಿಕ ನೆರವು ನೀಡುವುದಾಗಿ ಶಾಸಕ ಬಸವರಾಜ ಮತ್ತಿಮೂಡ ಹೇಳಿದ್ದಾರೆ. ಆದರೆ, ಇನ್ನೂ ಪರಿಹಾರ ಬಂದಿಲ್ಲ. ಕನಿಷ್ಠಪಕ್ಷ ಸರ್ಕಾರದ ನೆವನ್ನಾದರೂ ಕೂಡಲೇ ನೀಡಬೇಕು’ ಎಂದು ಗ್ರಾಮದ ಮುಖಂಡ ಧೂಳಪ್ಪ ಕಮಲಾಪುರಕರ್ ಆಗ್ರಹಿಸಿದ್ದಾರೆ.</p>.<p>‘ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡಬಾರದು. ದಸ್ತಾಪುರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಕೂಡ ಪರಿಹಾರದ ಬಗ್ಗೆ ನಿಖರ ಮಾಹಿತಿ ನೀಡಿಲ್ಲ. ಏನು ಬರುತ್ತದೋ ಅದನ್ನು ಕೊಡಿಸಲು ಯತ್ನಿಸುತ್ತೇನೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿಯೇ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆಂದರೆ ಅದೇ ರೀತಿಯ ಪರಿಹಾರವನ್ನೂ ಇಲ್ಲೂ ನೀಡಲು ಅಧಿಕಾರಿಗಳು ಏಕೆ ಹಿಂದೇಟು ಹಾಕಬೇಕು’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p>‘ದಸ್ತಾಪುರದಲ್ಲಿ ಈಗಲೂ ವಾಂತಿ ಭೇದಿ ಪ್ರಕರಣಗಳು ಮುಂದುವರಿದಿವೆ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕವಾಗಿ ನೀರಿನ ಡಬ್ಬಗಳನ್ನು ನೀಡಿದ್ದಾರೆ. ಆದರೆ, ಅವು ಯಾರಿಗೂ ಸಾಲುವುದಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಜನರನ್ನು ರೋಗಗಳ ಸಂಕಷ್ಟದಿಂದ ಪಾರು ಮಾಡಬೇಕು’ ಎಂದು ಶಿವರಾಯ ಸೂರನ್ ಅವರುಮುಖ್ಯಮಂತ್ರಿಗಳಿಗೆಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>