<p><strong>ಚಿಂಚೋಳಿ:</strong> ‘ತಾಲ್ಲೂಕಿನಲ್ಲಿ ಮಳೆಯಿಂದ ಒಟ್ಟು 39 ಮನೆಗಳಿಗೆ ಹಾನಿಯಾಗಿದೆ’ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದರು.</p>.<p>ಪ್ರಜಾವಾಣಿ ಜತೆಗೆ ಮಾತನಾಡಿದ ಅವರು,‘ಮನೆಯ ಗೋಡೆಗಳು ಅಲ್ಲಲ್ಲಿ ಉರುಳಿದ್ದು, ಸಂತ್ರಸ್ತರು ಅರ್ಜಿ ಸಲ್ಲಿಸಿದ್ದಾರೆ. ಅವರ ಮನೆಯ ಹಾನಿ ಕುರಿತು ಪ್ರಾಥಮಿಕ ಅಂದಾಜಿಸಿ ಪರಿಹಾರ ನೀಡಲಾಗುತ್ತಿದೆ. ತಾಲ್ಲೂಕಿನಲ್ಲಿ ಜೂನ್ನಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದೆ. ತಾಲ್ಲೂಕಿನಲ್ಲಿ ಹಳೆಯದಾದ ಮಣ್ಣಿನಿಂದ ಕಟ್ಟಿದ ಮನೆಯ ಗೋಡೆಗಳು ಉರುಳಿದ್ದು ಈ ಕುರಿತು ಆಧಿನ ಅಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ’ ಎಂದರು.</p>.<p>‘ಮಳೆಯಿಂದ ಮನೆಗೆ ಹಾನಿಯಾಗಿದ್ದರೆ ಈ ಕುರಿತು ಸಂಬಂಧಿಸಿದ ಅಧಿಕಾರಿ ಸಾಧ್ಯವಾದಷ್ಟು ಬೇಗ ಅಂದಾಜು ಪತ್ರಿಕೆ ಸಲ್ಲಿಸಬೇಕು. ಗ್ರಾ.ಪಂ. ಪಿಡಿಒ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿ ಸಂತ್ರಸ್ತರಿಗೆ ಬೇಗ ಪರಿಹಾರ ದೊರಕುವಂತೆ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ‘ತಾಲ್ಲೂಕಿನಲ್ಲಿ ಮಳೆಯಿಂದ ಒಟ್ಟು 39 ಮನೆಗಳಿಗೆ ಹಾನಿಯಾಗಿದೆ’ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದರು.</p>.<p>ಪ್ರಜಾವಾಣಿ ಜತೆಗೆ ಮಾತನಾಡಿದ ಅವರು,‘ಮನೆಯ ಗೋಡೆಗಳು ಅಲ್ಲಲ್ಲಿ ಉರುಳಿದ್ದು, ಸಂತ್ರಸ್ತರು ಅರ್ಜಿ ಸಲ್ಲಿಸಿದ್ದಾರೆ. ಅವರ ಮನೆಯ ಹಾನಿ ಕುರಿತು ಪ್ರಾಥಮಿಕ ಅಂದಾಜಿಸಿ ಪರಿಹಾರ ನೀಡಲಾಗುತ್ತಿದೆ. ತಾಲ್ಲೂಕಿನಲ್ಲಿ ಜೂನ್ನಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದೆ. ತಾಲ್ಲೂಕಿನಲ್ಲಿ ಹಳೆಯದಾದ ಮಣ್ಣಿನಿಂದ ಕಟ್ಟಿದ ಮನೆಯ ಗೋಡೆಗಳು ಉರುಳಿದ್ದು ಈ ಕುರಿತು ಆಧಿನ ಅಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ’ ಎಂದರು.</p>.<p>‘ಮಳೆಯಿಂದ ಮನೆಗೆ ಹಾನಿಯಾಗಿದ್ದರೆ ಈ ಕುರಿತು ಸಂಬಂಧಿಸಿದ ಅಧಿಕಾರಿ ಸಾಧ್ಯವಾದಷ್ಟು ಬೇಗ ಅಂದಾಜು ಪತ್ರಿಕೆ ಸಲ್ಲಿಸಬೇಕು. ಗ್ರಾ.ಪಂ. ಪಿಡಿಒ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿ ಸಂತ್ರಸ್ತರಿಗೆ ಬೇಗ ಪರಿಹಾರ ದೊರಕುವಂತೆ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>