ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ವಿದ್ಯುತ್‌ ಕಳವು; ₹ 4 ಲಕ್ಷ ದಂಡ

Last Updated 17 ಏಪ್ರಿಲ್ 2022, 4:24 IST
ಅಕ್ಷರ ಗಾತ್ರ

ಕಲಬುರಗಿ: ಸೇಡಂ ತಾಲ್ಲೂಕಿನ ಮದರ ನಾಗಸನಹಳ್ಳಿಯಲ್ಲಿ ಕಲ್ಲಿನ ಕ್ವಾರಿಗೆ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದ ವ್ಯಕ್ತಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ₹ 4 ಲಕ್ಷ ದಂಡ ವಿಧಿಸಿದೆ.

ಪ್ರತಾಪರೆಡ್ಡಿ ಸೋಮನಾಥರೆಡ್ಡಿ ಶಿಕ್ಷೆಗೆ ಒಳಗಾದವರು. 2018ರಲ್ಲಿ ಜೆಸ್ಕಾಂ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಸರ್ಕಾರದ ಪರವಾಗಿ 1ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಎಸ್‌.ಆರ್‌. ನರಸಿಂಹಲು ವಾದ ಮಂಡಿಸಿದ್ದರು.

ನ್ಯಾಯಾಧೀಶರಾದ ಶುಕ್ಲಾಕ್ಷ ಪಾಲನ್‌ ಅವರು ವಿಚಾರಣೆ ನಡೆಸಿ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ದಂಡ ಕಟ್ಟಲು ಆಗದಿದ್ದರೆ 2 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT