ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಅಭಿವೃದ್ಧಿ ಮಾಡದ ಅನಂತಕುಮಾರ ತಮ್ಮನ್ನು ತಾವೇ ನಾಲಾಯಕ್ ಎಂದು ಕರೆದುಕೊಂಡಿದ್ದಾರೆ. ವಿವಾದಿತ ಮಾತುಗಳ ಮೂಲಕ ನಾಯಕರಾಗಲು ಬಯಸಿರುವ ಅವರಿಗೆ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಬುದ್ಧಿಜೀವಿಗಳು, ಸಾಹಿತಿಗಳ ಬಗ್ಗೆ ಹಗುರವಾಗಿ ಮಾತನಾಡುವುದೇ ಅವರ ಸಾಧನೆಯಾಗಿದೆ’ ಎಂದು ಟೀಕಿಸಿದರು.