ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕು ಮುನಳ್ಳಿಯ ವಿಕಾಸ ಸಂಜು ಗಾಯಕವಾಡ ಮೃತಪಟ್ಟವರು. ಬೆಳಿಗ್ಗೆ ನಡೆದ ಓಟದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದು, ಹೃದಯಾಘಾತವಾಗಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈಶಾನ್ಯ ವಲಯ ಐಜಿಪಿ ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಭೇಟಿ ನೀಡಿದರು.