<p><strong>ಆಳಂದ: </strong>ತಾಲ್ಲೂಕಿನ ತಡೋಳಾ ಗ್ರಾಮ ಪಂಚಾಯಿತಿಯಲ್ಲಿ ₹14 ಲಕ್ಷ ಅನುದಾನ ದುರ್ಬಳಕೆಯ ತನಿಖೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿ ಎದುರು ಗ್ರಾಮಸ್ಥರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಮಂಗಳವಾರ ಮಧ್ಯಾಹ್ನ ಉಪವಾಸ ನಿರತ ಅಸ್ಪಾಕ್ ಮುಲ್ಲಾ, ಪರಶುರಾಮ, ಮೈಲಾರಿ ಅಸ್ವಸ್ಥರಾಗಿ ಖಜೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರತಿಭಟನಕಾರರನ್ನು ಉದ್ದೇಶಿಸಿ ಮುಖಂಡ ಮೌಲಾ ಮುಲ್ಲಾ ಮಾತನಾಡಿ, ‘ಪಂಚಾಯಿತಿಗೆ ನಿಯೋಜನೆಗೊಂಡ ಪಿಡಿಒ ಒಂದು ತಿಂಗಳಲ್ಲಿ ₹14 ಲಕ್ಷ ಅವ್ಯವಹಾರ ಮಾಡಿದ್ದಾರೆ. ತಕ್ಷಣ ಬೇರೆಡೆ ವರ್ಗವಾಗಿದ್ದಾರೆ. ಇದು ಪೂರ್ವ ನಿಯೋಜಿತ ಭ್ರಷ್ಠಾಚಾರವಾಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ’ ಎಂದು ಅವರು ಆಪಾದಿಸಿದರು.</p>.<p>ಪ್ರತಿಭಟನೆ ಸ್ಥಳಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿದರು. ಪ್ರತಿಭಟನಾಕಾರರು ಅವ್ಯವಹಾರದ ತನಿಖೆ ಹಾಗೂ ಪಿಡಿಒ ಅವರ ವಿರುದ್ಧ ಕ್ರಮಕ್ಕೆ ಬಿಗಿ ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ: </strong>ತಾಲ್ಲೂಕಿನ ತಡೋಳಾ ಗ್ರಾಮ ಪಂಚಾಯಿತಿಯಲ್ಲಿ ₹14 ಲಕ್ಷ ಅನುದಾನ ದುರ್ಬಳಕೆಯ ತನಿಖೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿ ಎದುರು ಗ್ರಾಮಸ್ಥರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಮಂಗಳವಾರ ಮಧ್ಯಾಹ್ನ ಉಪವಾಸ ನಿರತ ಅಸ್ಪಾಕ್ ಮುಲ್ಲಾ, ಪರಶುರಾಮ, ಮೈಲಾರಿ ಅಸ್ವಸ್ಥರಾಗಿ ಖಜೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರತಿಭಟನಕಾರರನ್ನು ಉದ್ದೇಶಿಸಿ ಮುಖಂಡ ಮೌಲಾ ಮುಲ್ಲಾ ಮಾತನಾಡಿ, ‘ಪಂಚಾಯಿತಿಗೆ ನಿಯೋಜನೆಗೊಂಡ ಪಿಡಿಒ ಒಂದು ತಿಂಗಳಲ್ಲಿ ₹14 ಲಕ್ಷ ಅವ್ಯವಹಾರ ಮಾಡಿದ್ದಾರೆ. ತಕ್ಷಣ ಬೇರೆಡೆ ವರ್ಗವಾಗಿದ್ದಾರೆ. ಇದು ಪೂರ್ವ ನಿಯೋಜಿತ ಭ್ರಷ್ಠಾಚಾರವಾಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ’ ಎಂದು ಅವರು ಆಪಾದಿಸಿದರು.</p>.<p>ಪ್ರತಿಭಟನೆ ಸ್ಥಳಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿದರು. ಪ್ರತಿಭಟನಾಕಾರರು ಅವ್ಯವಹಾರದ ತನಿಖೆ ಹಾಗೂ ಪಿಡಿಒ ಅವರ ವಿರುದ್ಧ ಕ್ರಮಕ್ಕೆ ಬಿಗಿ ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>