<p><strong>ಕಲಬುರ್ಗಿ:</strong> ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕಳೆದ 7ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸುತ್ತಿರುವ ಸಿಬ್ಬಂದಿ ವಿರುದ್ಧ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಶಿಸ್ತು ಕ್ರಮ ಮುಂದುವರಿದಿದ್ದು, ಮಂಗಳವಾರ ಮತ್ತೆ ಆರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಾಲ್ವರನ್ನು ಅಮಾನತುಗೊಳಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.</p>.<p>ಇದಕ್ಕೂ ಮುನ್ನ 67 ಸಿಬ್ಬಂದಿಯನ್ನು ವಜಾ ಮಾಡಿ, 39 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. 245 ಸಿಬ್ಬಂದಿಯನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.</p>.<p>‘ವಜಾ ಹಾಗೂ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯುವ ಯಾವುದೇ ಚಿಂತನೆ ಸಂಸ್ಥೆಯ ಮುಂದಿಲ್ಲ. ಆದ್ದರಿಂದ ಸುಳ್ಳು ಸುದ್ದಿಗಳಿಗೆ ಗಮನ ಕೊಡದೇ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಇದರಿಂದ ಶಿಸ್ತು ಕ್ರಮ ಕೈಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ. ಪ್ರಯಾಣಿಕರ ಹಿತವನ್ನು ಕಡೆಗಣಿಸಿ ಕರ್ತವ್ಯದಿಂದ ದೂರ ಉಳಿದರೆ ಕಠಿಣ ಕ್ರಮ ಅನಿವಾರ್ಯ’ ಎಂದು ಕೂರ್ಮಾರಾವ್ ಎಚ್ಚರಿಕೆ ನೀಡಿದ್ದಾರೆ.</p>.<p class="Subhead">ಮತ್ತೆ ಎರಡು ಪ್ರಕರಣ: ಕರ್ತವ್ಯ ಅಡ್ಡಿ ಉಂಟು ಮಾಡಿದ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕೆಲಸಕ್ಕೆ ಹಾಜರಾಗದಂತೆ ಬೇರೆ ಸಿಬ್ಬಂದಿಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಸಂಸ್ಥೆಯು ನೌಕರರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲಿಸಿದೆ. ಇದರಿಂದಾಗಿ ಒಟ್ಟಾರೆ 55 ಸಿಬ್ಬಂದಿ ವಿರುದ್ಧ 30 ಪ್ರಕರಣಗಳು ದಾಖಲಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕಳೆದ 7ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸುತ್ತಿರುವ ಸಿಬ್ಬಂದಿ ವಿರುದ್ಧ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಶಿಸ್ತು ಕ್ರಮ ಮುಂದುವರಿದಿದ್ದು, ಮಂಗಳವಾರ ಮತ್ತೆ ಆರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಾಲ್ವರನ್ನು ಅಮಾನತುಗೊಳಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.</p>.<p>ಇದಕ್ಕೂ ಮುನ್ನ 67 ಸಿಬ್ಬಂದಿಯನ್ನು ವಜಾ ಮಾಡಿ, 39 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. 245 ಸಿಬ್ಬಂದಿಯನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.</p>.<p>‘ವಜಾ ಹಾಗೂ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯುವ ಯಾವುದೇ ಚಿಂತನೆ ಸಂಸ್ಥೆಯ ಮುಂದಿಲ್ಲ. ಆದ್ದರಿಂದ ಸುಳ್ಳು ಸುದ್ದಿಗಳಿಗೆ ಗಮನ ಕೊಡದೇ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಇದರಿಂದ ಶಿಸ್ತು ಕ್ರಮ ಕೈಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ. ಪ್ರಯಾಣಿಕರ ಹಿತವನ್ನು ಕಡೆಗಣಿಸಿ ಕರ್ತವ್ಯದಿಂದ ದೂರ ಉಳಿದರೆ ಕಠಿಣ ಕ್ರಮ ಅನಿವಾರ್ಯ’ ಎಂದು ಕೂರ್ಮಾರಾವ್ ಎಚ್ಚರಿಕೆ ನೀಡಿದ್ದಾರೆ.</p>.<p class="Subhead">ಮತ್ತೆ ಎರಡು ಪ್ರಕರಣ: ಕರ್ತವ್ಯ ಅಡ್ಡಿ ಉಂಟು ಮಾಡಿದ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕೆಲಸಕ್ಕೆ ಹಾಜರಾಗದಂತೆ ಬೇರೆ ಸಿಬ್ಬಂದಿಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಸಂಸ್ಥೆಯು ನೌಕರರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲಿಸಿದೆ. ಇದರಿಂದಾಗಿ ಒಟ್ಟಾರೆ 55 ಸಿಬ್ಬಂದಿ ವಿರುದ್ಧ 30 ಪ್ರಕರಣಗಳು ದಾಖಲಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>