ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ಸಿಗೆ ಡಿಕ್ಕಿ ಹೊಡೆದ ಲಾರಿ: 7 ಜನರಿಗೆ ಗಾಯ

ಲಾರ್‌ ಟೈರ್‌ ಸಿಡಿದು ಸಂಭವಿಸಿದ ಅವಘಡ, ತಪ್ಪಿದ ಭಾರಿ ಅನಾಹುತ
Last Updated 25 ಫೆಬ್ರುವರಿ 2021, 10:06 IST
ಅಕ್ಷರ ಗಾತ್ರ

ರೇವೂರ್‌ (ಕಲಬುರ್ಗಿ): ವಾಡಿ ಸಮೀಪದ ರೇವೂರ್‌ ಗ್ರಾಮದ ಬಳಿ ಗುರುವಾರ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್‌ ಚಾಲಕ ಹಾಗೂ ನಿರ್ವಾಹಕ ಸೇರಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ.‌

ಸಾರಿಗೆ ಸಂಸ್ಥೆಯ ಬಸ್‌ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. ಈ ವೇಳೆ ಎದುರುಗಡೆಯಿಂದ ಪರಸಿ ಕಲ್ಲುಗಳನ್ನು ತುಂಬಿಕೊಂಡ ಲಾರಿಯ ಟೈರ್‌ ಏಕಾಏಕಿ ಸಿಡಿಯಿತು. ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.‌ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮುಂದಿನ ಸೀಟ್‌ನಲ್ಲಿದ್ದ ಬಸ್‌ ನಿರ್ವಾಹಕ, ಚಾಲಕ ಹಾಗೂ ಐವರು ಪ್ರಯಾಣಿಕರಿಗೆ ಹೆಚ್ಚು ಗಾಯಗಲಾಗಿದ್ದು, ಉಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಲಾರಿ ಗುದ್ದಿದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT