ನೀಲೇಶ ಹಲವು ಬಾರಿ ಮದ್ಯಪಾನ ಮಾಡಿ ಷರೀಫ್ ಅವರೊಂದಿಗೆ ತಂಟೆ ತಕರಾರು ಮಾಡುತ್ತಿದ್ದ. 2017ರ ಆಗಸ್ಟ್ 17ರಂದು ಬೆಳಗಿನ ಜಾವ ಹೋಟೆಲ್ನ ಮೊದಲ ಮಹಡಿಯಲ್ಲಿ ಮಲಗಿಕೊಂಡಿದ್ದ ಷರೀಫ್ ಅವರ ತಲೆಗೆ ಸಿಲಿಂಡರ್ನಿಂದ ಹೊಡೆದು ಗಾಯಗೊಳಿಸಿದ್ದ. ನಂತರ ಹಲವು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಲಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕ ನಗರ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ರಮೇಶ ಕಾಂಬಳೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.