ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2017–18ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪೋಷಣ ಅಭಿಯಾನವನ್ನು ಆರಂಭಿಸಿದ್ದರು. ಆದರೆ, ರಾಜ್ಯದಲ್ಲಿ ಇದಕ್ಕೆ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಯೋಜನೆಯ ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಅಷ್ಟೂ ಸ್ಮಾರ್ಟ್ಫೋನ್ಗಳನ್ನು ವಿತರಿಸಲಾಗಿದೆ. ಮೊದಲು ಶಿಶುಗಳು ಹಾಗೂ ಗರ್ಭಿಣಿ, ಬಾಣಂತಿಯರ ಆರೋಗ್ಯದ ವಿವರವನ್ನು ಪುಸ್ತಕದಲ್ಲಿ ಬರೆದುಕೊಳ್ಳಲಾಗುತ್ತಿತ್ತು. ಅದನ್ನು ಬದಲಾಯಿಸಿ ಆನ್ಲೈನ್ ಮಾಡಲಾಗಿದ್ದು, ತಕ್ಷಣದ ಮಾಹಿತಿ ಲಭ್ಯವಾಗುತ್ತಿದ. ಇದರಿಂದ ಆರೋಗ್ಯದ ಮೇಲೆ ಹೆಚ್ಚು ನಿಗಾ ಇಡಬಹುದಾಗಿದೆ’ ಎಂದರು.