ಈ ಸಂದರ್ಭದಲ್ಲಿ ಮಾತನಾಡಿದ ರೇವೂರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ದೇಶದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ತುರ್ತು ಪರಿಸ್ಥಿತಿಯ ತಕ್ಷಣದ ಸ್ಪಂದನೆಗಾಗಿ ಇಆರ್ ಎಸ್ಎಸ್ (ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ) ಯೋಜನೆಯಡಿ 112 ಸಂಖ್ಯೆಯನ್ನು ಪರಿಚಯಿಸಿದ್ದಾರೆ. ಕಲಬುರ್ಗಿಯಲ್ಲಿಯೂ ಎಂಟು ವಾಹನಗಳ ಖರೀದಿಗೆ ಪೊಲೀಸ್ ಕಮಿಷನರ್ ಅವರು ಮಂಡಳಿಯಿಂದ ಆರ್ಥಿಕ ನೆರವು ಕೋರಿದ್ದರು. ₹ 1 ಕೋಟಿ ವೆಚ್ಚದಲ್ಲಿ ಸ್ಕಾರ್ಪಿಯೊ ವಾಹನಗಳನ್ನು ಖರೀದಿಸಿ ಕೊಡಲಾಗಿದೆ. ಸಿಗ್ನಲ್ ವ್ಯವಸ್ಥೆ ಬಲವರ್ಧನೆಗಾಗಿ ₹ 1 ಕೋಟಿ ನೀಡಲಾಗಿದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲು ಸಿದ್ಧ' ಎಂದರು.