<p><strong>ಚಿಂಚೋಳಿ</strong>: ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ್ದು, ಮದುವೆಯಾಗಿ ಮೂರು ವಾರವಾಗಿತ್ತು.</p>.<p>ಮೋಹಸಿನ್ ಒಶಾ ಪಟೇಲ್ (22) ಮೃತ ಯುವಕ. ಇವರು ಸಾಸರಗಾಂವ್ ಗ್ರಾಮದವರಾದ ಇವರು ಜೂನ್ 15ರಂದು ಮದುವೆಯಾಗಿದ್ದರು. ಕಳೆದ ಹಲವು ವರ್ಷಗಳಿಂದ ಚಂದನಕೇರಾದಲ್ಲಿ ನೆಲೆಸಿದ್ದರು. ಈಚೆಗೆ ಕಲಬುರಗಿಗೆ ತೆರಳಿದ್ದು, ಅಲ್ಲಿಯೇ ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು.</p>.<p>ಚಾಲಕ ವೃತ್ತಿ ಮಾಡುತ್ತಿದ್ದ ಮೊಹಸಿನ್ ಮೊಹರಂ ಹಬ್ಬಕ್ಕಾಗಿ ಸ್ವಗ್ರಾಮ ಚಂದನಕೇರಾ ಗ್ರಾಮಕ್ಕೆ ಬಂದಿದ್ದು ಮಧ್ಯಾಹ್ನ ಕುಸಿದು ಬಿದ್ದಿದ್ದಾರೆ. ತಕ್ಷಣ ಚಂದನಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p><strong>ಮರಣ ಮೃದಂಗ:</strong> ತಾಲ್ಲೂಕಿನಲ್ಲಿ ಹೃದಯಘಾತ ಮತ್ತು ಹೃದಯ ಸ್ತಂಭನ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಕಳೆದ 6 ತಿಂಗಳಲ್ಲಿ ಸುಮಾರು 40 ಮಂದಿ ಮೃತಪಟ್ಟಿದ್ದು ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಇದರಲ್ಲಿ 15 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಗಮನಾರ್ಹ.</p>.<p>‘ಉಸಿರಾಟ ಮತ್ತು ಹೃದಯ ಸಂಬಂಧಿ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂದು ಸತ್ತವರ ಕುಟುಂಬದವರು ಮಾಹಿತಿ ನೀಡಿದ್ದು ದಾಖಲಿಸಿಕೊಂಡು ಶವ ಹಸ್ತಾಂತರ ಮಾಡಲಾಗಿದೆ. ಇಂತಹ ಪ್ರಕರಣಗಳು ಕಳೆದ 2 ವರ್ಷಗಳಿಂದ ಹೆಚ್ಚುತ್ತಿರುವುದು ಕಂಡು ಬಂದಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಎಎಂಒ ಡಾ. ಸಂತೋಷ ಪಾಟೀಲ ತಿಳಿಸಿದರು.</p>.<p>‘ನಮ್ಮಲ್ಲಿ 9 ಮಂದಿ ಹೃದಯ ಸಂಬಂಧಿ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ತೆಲಂಗಾಣದವರು 4 ಮಂದಿಯಿದ್ದು ಒಟ್ಟು 9 ಮಂದಿ ಕಳೆದ 6 ತಿಂಗಳಲ್ಲಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಕರ್ನಾಟಕದ ಇಬ್ಬರು ತೆಲಂಗಾಣದ ನಾಲ್ವರು 40ಕ್ಕಿಂತ ಕಡಿಮೆ ವಯಸ್ಸಿನವರು’ ಎಂದು ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ.ಬಾಲಾಜಿ ಪಾಟೀಲ ತಿಳಿಸಿದರು.</p>.<div><blockquote>ಚಿಂಚೋಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿತ್ಯ 15ಕ್ಕೂ ಹೆಚ್ಚು ಜನರಿಗೆ ಇಸಿಜಿ ತಪಾಸಣೆ ನಡೆಸಲಾಗುತ್ತಿದೆ. ಈಗ ಇದರ ಪ್ರಮಾಣ ಇನ್ನಷ್ಟು ಹೆಚ್ಚುತ್ತಿದೆ.</blockquote><span class="attribution">– ಡಾ. ಸಂತೋಷ ಪಾಟೀಲ, ಎಂಎಂಒ, ಚಿಂಚೋಳಿ</span></div>.<div><blockquote>ಯುವಜನರಲ್ಲಿಯೇ ಹೃದಯ ಸಂಬಂಧಿ ಕಾಯಿಲೆ ಹೆಚ್ಚುತ್ತಿರುವುದರಿಂದ ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಅರಿವು ಕಾರ್ಯಕ್ರಮ ನಡೆಸಬೇಕು.</blockquote><span class="attribution">– ಶ್ರೀಮಂತ ಕಟ್ಟಿಮನಿ, ಅಧ್ಯಕ್ಷ, ವಕೀಲರ ಸಂಘ ಚಿಂಚೋಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ್ದು, ಮದುವೆಯಾಗಿ ಮೂರು ವಾರವಾಗಿತ್ತು.</p>.<p>ಮೋಹಸಿನ್ ಒಶಾ ಪಟೇಲ್ (22) ಮೃತ ಯುವಕ. ಇವರು ಸಾಸರಗಾಂವ್ ಗ್ರಾಮದವರಾದ ಇವರು ಜೂನ್ 15ರಂದು ಮದುವೆಯಾಗಿದ್ದರು. ಕಳೆದ ಹಲವು ವರ್ಷಗಳಿಂದ ಚಂದನಕೇರಾದಲ್ಲಿ ನೆಲೆಸಿದ್ದರು. ಈಚೆಗೆ ಕಲಬುರಗಿಗೆ ತೆರಳಿದ್ದು, ಅಲ್ಲಿಯೇ ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು.</p>.<p>ಚಾಲಕ ವೃತ್ತಿ ಮಾಡುತ್ತಿದ್ದ ಮೊಹಸಿನ್ ಮೊಹರಂ ಹಬ್ಬಕ್ಕಾಗಿ ಸ್ವಗ್ರಾಮ ಚಂದನಕೇರಾ ಗ್ರಾಮಕ್ಕೆ ಬಂದಿದ್ದು ಮಧ್ಯಾಹ್ನ ಕುಸಿದು ಬಿದ್ದಿದ್ದಾರೆ. ತಕ್ಷಣ ಚಂದನಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p><strong>ಮರಣ ಮೃದಂಗ:</strong> ತಾಲ್ಲೂಕಿನಲ್ಲಿ ಹೃದಯಘಾತ ಮತ್ತು ಹೃದಯ ಸ್ತಂಭನ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಕಳೆದ 6 ತಿಂಗಳಲ್ಲಿ ಸುಮಾರು 40 ಮಂದಿ ಮೃತಪಟ್ಟಿದ್ದು ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಇದರಲ್ಲಿ 15 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಗಮನಾರ್ಹ.</p>.<p>‘ಉಸಿರಾಟ ಮತ್ತು ಹೃದಯ ಸಂಬಂಧಿ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂದು ಸತ್ತವರ ಕುಟುಂಬದವರು ಮಾಹಿತಿ ನೀಡಿದ್ದು ದಾಖಲಿಸಿಕೊಂಡು ಶವ ಹಸ್ತಾಂತರ ಮಾಡಲಾಗಿದೆ. ಇಂತಹ ಪ್ರಕರಣಗಳು ಕಳೆದ 2 ವರ್ಷಗಳಿಂದ ಹೆಚ್ಚುತ್ತಿರುವುದು ಕಂಡು ಬಂದಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಎಎಂಒ ಡಾ. ಸಂತೋಷ ಪಾಟೀಲ ತಿಳಿಸಿದರು.</p>.<p>‘ನಮ್ಮಲ್ಲಿ 9 ಮಂದಿ ಹೃದಯ ಸಂಬಂಧಿ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ತೆಲಂಗಾಣದವರು 4 ಮಂದಿಯಿದ್ದು ಒಟ್ಟು 9 ಮಂದಿ ಕಳೆದ 6 ತಿಂಗಳಲ್ಲಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಕರ್ನಾಟಕದ ಇಬ್ಬರು ತೆಲಂಗಾಣದ ನಾಲ್ವರು 40ಕ್ಕಿಂತ ಕಡಿಮೆ ವಯಸ್ಸಿನವರು’ ಎಂದು ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ.ಬಾಲಾಜಿ ಪಾಟೀಲ ತಿಳಿಸಿದರು.</p>.<div><blockquote>ಚಿಂಚೋಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿತ್ಯ 15ಕ್ಕೂ ಹೆಚ್ಚು ಜನರಿಗೆ ಇಸಿಜಿ ತಪಾಸಣೆ ನಡೆಸಲಾಗುತ್ತಿದೆ. ಈಗ ಇದರ ಪ್ರಮಾಣ ಇನ್ನಷ್ಟು ಹೆಚ್ಚುತ್ತಿದೆ.</blockquote><span class="attribution">– ಡಾ. ಸಂತೋಷ ಪಾಟೀಲ, ಎಂಎಂಒ, ಚಿಂಚೋಳಿ</span></div>.<div><blockquote>ಯುವಜನರಲ್ಲಿಯೇ ಹೃದಯ ಸಂಬಂಧಿ ಕಾಯಿಲೆ ಹೆಚ್ಚುತ್ತಿರುವುದರಿಂದ ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಅರಿವು ಕಾರ್ಯಕ್ರಮ ನಡೆಸಬೇಕು.</blockquote><span class="attribution">– ಶ್ರೀಮಂತ ಕಟ್ಟಿಮನಿ, ಅಧ್ಯಕ್ಷ, ವಕೀಲರ ಸಂಘ ಚಿಂಚೋಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>