<p><strong>ಶಹಾಬಾದ್: </strong>‘ಭಾರತಕ್ಕೆ ಸಂವಿಧಾನ ರಚಿಸಿ, ಭದ್ರ ಬುನಾದಿ ಒದಗಿಸಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಭಾರತದ ಸಂವಿಧಾನದ ಶಿಲ್ಪಿ’ ಎಂದು ಕರೆಯುತ್ತಾರೆ ಎಂದು ದಲಿತ ಮುಖಂಡ ಶಿವಶಾಲಕುಮಾರ ಪಟ್ಟಣಕರ್ ಹೇಳಿದರು.</p>.<p>ನಗರದ ಮಹಾದೇವಮ್ಮ ಆಸ್ಪಲ್ಲಿ ಪ್ರೌಢಶಾಲೆಯಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂವಿಧಾನ ಸಮರ್ಪಣೆ ದಿನದ ನಿಮಿತ್ತ ಮಂಗಳವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ನಮ್ಮ ಧರ್ಮಗ್ರಂಥ ಇದ್ಧಂತೆ. ಅಂಬೇಡ್ಕರ್ ಕೊಟ್ಟ ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ<br />ಉತ್ತಮ ಸಂವಿಧಾನ ಆಗಿದೆ’ ಎಂದು ಹೇಳಿದರು.</p>.<p>ಭಾರತೀಯ ದಲಿತ ಪ್ಯಾಂಥರ್ನ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿ ಮಾತನಾಡಿ,‘ಡಾ.ಅಂಬೇಡ್ಕರ್ ಸಾಕಷ್ಟು ಅಪಮಾನಕ್ಕೆ ಗುರಿಯಾಗಿದ್ದರೂ ದೇಶಕ್ಕೆ ಒಂದು ಉತ್ತಮ ಕೊಡುಗೆ ನೀಡಿದ್ದಾರೆ. ಆ ಸಂವಿಧಾನ ನಮಗೆ ದಾರಿದೀಪವಾಗಿದೆ’ ಎಂದರು.</p>.<p>ಭಾರತೀಯ ದಲಿತ ಪ್ಯಾಂಥರ್ ಉಪಾಧ್ಯಕ್ಷ ಶಂಕರ ಅಳೊಳ್ಳಿ ಮಾತನಾಡಿ, ‘ಸಂವಿಧಾನದ ಮೌಲ್ಯಗಳನ್ನು ಅರಿತು ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿ ಇರುತ್ತದೆ’ ಎಂದು ಅವರು<br />ಹೇಳಿದರು.</p>.<p>ಮುಖ್ಯ ಶಿಕ್ಷಕಿ ಶೋಭಾ ಅರಳಿ, ಪ್ರದೀಪ ಕೋಬಾಳಕರ್, ಮಲ್ಲಿಕಾರ್ಜುನ ಬಾಡಬುಳ, ಆಂಜನೇಯ ಕುಸಾಳೆ, ಸುಭಾಷ ಕಾಂಬಳೆ, ವಿಲಾಸ ಜಾಯಿ, ಶಿವು ಪಗಲಾಪೂರ, ಸೊಪ್ಪಣ್ಣ ಇದ್ದರು. ಶಾಲಾ ಮಕ್ಕಳಿಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್: </strong>‘ಭಾರತಕ್ಕೆ ಸಂವಿಧಾನ ರಚಿಸಿ, ಭದ್ರ ಬುನಾದಿ ಒದಗಿಸಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಭಾರತದ ಸಂವಿಧಾನದ ಶಿಲ್ಪಿ’ ಎಂದು ಕರೆಯುತ್ತಾರೆ ಎಂದು ದಲಿತ ಮುಖಂಡ ಶಿವಶಾಲಕುಮಾರ ಪಟ್ಟಣಕರ್ ಹೇಳಿದರು.</p>.<p>ನಗರದ ಮಹಾದೇವಮ್ಮ ಆಸ್ಪಲ್ಲಿ ಪ್ರೌಢಶಾಲೆಯಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂವಿಧಾನ ಸಮರ್ಪಣೆ ದಿನದ ನಿಮಿತ್ತ ಮಂಗಳವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ನಮ್ಮ ಧರ್ಮಗ್ರಂಥ ಇದ್ಧಂತೆ. ಅಂಬೇಡ್ಕರ್ ಕೊಟ್ಟ ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ<br />ಉತ್ತಮ ಸಂವಿಧಾನ ಆಗಿದೆ’ ಎಂದು ಹೇಳಿದರು.</p>.<p>ಭಾರತೀಯ ದಲಿತ ಪ್ಯಾಂಥರ್ನ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿ ಮಾತನಾಡಿ,‘ಡಾ.ಅಂಬೇಡ್ಕರ್ ಸಾಕಷ್ಟು ಅಪಮಾನಕ್ಕೆ ಗುರಿಯಾಗಿದ್ದರೂ ದೇಶಕ್ಕೆ ಒಂದು ಉತ್ತಮ ಕೊಡುಗೆ ನೀಡಿದ್ದಾರೆ. ಆ ಸಂವಿಧಾನ ನಮಗೆ ದಾರಿದೀಪವಾಗಿದೆ’ ಎಂದರು.</p>.<p>ಭಾರತೀಯ ದಲಿತ ಪ್ಯಾಂಥರ್ ಉಪಾಧ್ಯಕ್ಷ ಶಂಕರ ಅಳೊಳ್ಳಿ ಮಾತನಾಡಿ, ‘ಸಂವಿಧಾನದ ಮೌಲ್ಯಗಳನ್ನು ಅರಿತು ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿ ಇರುತ್ತದೆ’ ಎಂದು ಅವರು<br />ಹೇಳಿದರು.</p>.<p>ಮುಖ್ಯ ಶಿಕ್ಷಕಿ ಶೋಭಾ ಅರಳಿ, ಪ್ರದೀಪ ಕೋಬಾಳಕರ್, ಮಲ್ಲಿಕಾರ್ಜುನ ಬಾಡಬುಳ, ಆಂಜನೇಯ ಕುಸಾಳೆ, ಸುಭಾಷ ಕಾಂಬಳೆ, ವಿಲಾಸ ಜಾಯಿ, ಶಿವು ಪಗಲಾಪೂರ, ಸೊಪ್ಪಣ್ಣ ಇದ್ದರು. ಶಾಲಾ ಮಕ್ಕಳಿಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>