ಕಮಲಾಪುರ (ಕಲಬುರಗಿ ಜಿಲ್ಲೆ): ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಕ್ರಾಸ್ ಸಮೀಪದ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಿಣ್ಣಿ ಸಡಕ್ ಗ್ರಾಮದ ಸಮೀರ್ ಜಮೀರ್ ಸಾಬ್ (22), ವಿಶಾಲ ಸಂಜಯಕುಮಾರ ಜಾಧವ (20) ಮತ್ತು ಚಂದ್ರಕಾಂತ ನಿಂಗಪ್ಪ ಹೊಳಕುಂದಿ (23) ಮೃತ ಯುವಕರು. ಈ ಮೂವರು ಸೇರಿ ಬೈಕ್ ಮೇಲೆ ಕಮಲಾಪುರಕ್ಕೆ ಬರುತ್ತಿದ್ದರು.
ಕಲಬುರಗಿಯಿಂದ ಹುಮನಾಬಾದ್ಗೆ ತೆರಳುತ್ತಿದ್ದ ವಿಜಯಪುರ-ಬಸವಕಲ್ಯಾಣ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.