<p>ಕಲಬುರಗಿ: ‘ಕಾನೂನು ವಿದ್ಯಾರ್ಥಿಗಳ ಮೇಲೆ ದೊಡ್ಡ ಜವಾಬ್ದಾರಿ ಇರುತ್ತದೆ. ಕಾನೂನು ವಿದ್ಯಾರ್ಥಿಗಳಿಂದ ಬಹಳಷ್ಟು ಜನರು ಒಳಿತನ್ನು ನಿರೀಕ್ಷೆ ಮಾಡ್ತಿರುತ್ತಾರೆ. ಎನ್ಎಸ್ಎಸ್ನಂತ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡುವುದರಿಂದ ಸಾಕಷ್ಟು ಅನುಕೂಲಗಳಾಗುತ್ತವೆ’ ಎಂದು ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು ಹೇಳಿದರು.</p>.<p>ಶ್ರೀನಿವಾಸ ಸರಡಗಿ ಗ್ರಾಮದ ಚಿನ್ನದಕಂತಿ ಚಿಕ್ಕವೀರೇಶ್ವರ ಹಿರೇಮಠದ ಆವರಣದಲ್ಲಿ ಎಚ್ಕೆಇ ಸಂಸ್ಥೆಯ ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಹಮ್ಮಿಕೊಂಡ ಒಂದು ದಿನದ ಎನ್ಎಸ್ಎಸ್ ಶಿಬಿರ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಜನರಿಗೆ ಪರಿಸರ, ಕಾನೂನಿನ ಅರಿವು ಮೂಡಿಸುವುದು ಬಹಳ ಮುಖ್ಯ. ಇಂತಹ ಶಿಬಿರಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸಗಳನ್ನು ಕಾನೂನು ವಿದ್ಯಾರ್ಥಿಗಳು ಮಾಡಬೇಕು’ ಎಂದು ಹೇಳಿದರು.</p>.<p>ಎನ್ಎಸ್ಎಸ್ ಅಧಿಕಾರಿ ಜ್ಯೋತಿ ಕಡಾದಿ ಮಾತನಾಡಿದರು. ಉಪನ್ಯಾಸಕಿ ಕರುಣಾ ಪಾಟೀಲ, ಗ್ರಾಮದ ಮುಖಂಡರಾದ ಸಂಗಯ್ಯಸ್ವಾಮಿ ಹಿರೇಮಠ, ಶರಣಗೌಡ ಬಿರಾದಾರ, ಅಯ್ಯಣ್ಣ ಪಾಮನಕಲ್ಲೂರ ಇತರರಿದ್ದರು.</p>.<p>ವಿದ್ಯಾರ್ಥಿನಿ ಗೀತಾಶ್ರೀ ಪ್ರಾರ್ಥಿಸಿದರೆ, ಭಾಗ್ಯಶ್ರೀ ಸ್ವಾಗತಿಸಿದರು. ಅಮರೇಶ್ ನಿರೂಪಿಸಿದರೆ, ಆಶೀಸ್ ಕುಮಾರ್ ವಂದಿಸಿದರು.</p>.<p>ಬೆಳಿಗ್ಗೆಯಿಂದ ಸಂಜೆಯವರೆಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮ ನಡೆಸಿ, ಸಸಿ ನಾಟಿ ಮಾಡುವ ಮೂಲಕ ಶ್ರಮದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಕಾನೂನು ವಿದ್ಯಾರ್ಥಿಗಳ ಮೇಲೆ ದೊಡ್ಡ ಜವಾಬ್ದಾರಿ ಇರುತ್ತದೆ. ಕಾನೂನು ವಿದ್ಯಾರ್ಥಿಗಳಿಂದ ಬಹಳಷ್ಟು ಜನರು ಒಳಿತನ್ನು ನಿರೀಕ್ಷೆ ಮಾಡ್ತಿರುತ್ತಾರೆ. ಎನ್ಎಸ್ಎಸ್ನಂತ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡುವುದರಿಂದ ಸಾಕಷ್ಟು ಅನುಕೂಲಗಳಾಗುತ್ತವೆ’ ಎಂದು ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು ಹೇಳಿದರು.</p>.<p>ಶ್ರೀನಿವಾಸ ಸರಡಗಿ ಗ್ರಾಮದ ಚಿನ್ನದಕಂತಿ ಚಿಕ್ಕವೀರೇಶ್ವರ ಹಿರೇಮಠದ ಆವರಣದಲ್ಲಿ ಎಚ್ಕೆಇ ಸಂಸ್ಥೆಯ ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಹಮ್ಮಿಕೊಂಡ ಒಂದು ದಿನದ ಎನ್ಎಸ್ಎಸ್ ಶಿಬಿರ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಜನರಿಗೆ ಪರಿಸರ, ಕಾನೂನಿನ ಅರಿವು ಮೂಡಿಸುವುದು ಬಹಳ ಮುಖ್ಯ. ಇಂತಹ ಶಿಬಿರಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸಗಳನ್ನು ಕಾನೂನು ವಿದ್ಯಾರ್ಥಿಗಳು ಮಾಡಬೇಕು’ ಎಂದು ಹೇಳಿದರು.</p>.<p>ಎನ್ಎಸ್ಎಸ್ ಅಧಿಕಾರಿ ಜ್ಯೋತಿ ಕಡಾದಿ ಮಾತನಾಡಿದರು. ಉಪನ್ಯಾಸಕಿ ಕರುಣಾ ಪಾಟೀಲ, ಗ್ರಾಮದ ಮುಖಂಡರಾದ ಸಂಗಯ್ಯಸ್ವಾಮಿ ಹಿರೇಮಠ, ಶರಣಗೌಡ ಬಿರಾದಾರ, ಅಯ್ಯಣ್ಣ ಪಾಮನಕಲ್ಲೂರ ಇತರರಿದ್ದರು.</p>.<p>ವಿದ್ಯಾರ್ಥಿನಿ ಗೀತಾಶ್ರೀ ಪ್ರಾರ್ಥಿಸಿದರೆ, ಭಾಗ್ಯಶ್ರೀ ಸ್ವಾಗತಿಸಿದರು. ಅಮರೇಶ್ ನಿರೂಪಿಸಿದರೆ, ಆಶೀಸ್ ಕುಮಾರ್ ವಂದಿಸಿದರು.</p>.<p>ಬೆಳಿಗ್ಗೆಯಿಂದ ಸಂಜೆಯವರೆಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮ ನಡೆಸಿ, ಸಸಿ ನಾಟಿ ಮಾಡುವ ಮೂಲಕ ಶ್ರಮದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>