<p><strong>ಕಲಬುರ್ಗಿ</strong>: ಜಿಲ್ಲೆಯ ಜೇವರ್ಗಿ ಪಟ್ಟಣದ ಉದ್ಯಾನಗಳನ್ನು ಅತಿಕ್ರಮಣ ಮಾಡಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಜೇವರ್ಗಿ ತಾಲ್ಲೂಕು ಘಟಕದ ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುದು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಪುರಸಭೆ ವ್ಯಾಪ್ತಿಯಲ್ಲಿ ಬರುವ 18 ಉದ್ಯಾನಗಳನ್ನು ಅತಿಕ್ರಮಣ ಮಾಡಿಕೊಂಡು 176 ಕಟ್ಟಡ ಕಟ್ಟಲಾಗಿದೆ. ಇವುಗಳಿಗೆ ಯಾವುದೇ ದಾಖಲೆಗಳಿಲ್ಲ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಲ್ಲಿನ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿದ್ದಾರೆ. ಅನಿವಾರ್ಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬರಬೇಕಾಯಿತು ಎಂದು ಪ್ರತಿಭಟನಾಕಾರರು ದೂರಿದರು.</p>.<p>ಪುರಸಭೆಯ ಆರು ಸಿಬ್ಬಂದಿಯೂ ಇದರಲ್ಲಿ ಶಾಮೀಲಾಗಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ಹಿಂದೆ 65 ದಿನಗಳ ಕಾಲ ನಿರಂತರ ಧರಣಿ ನಡೆಸಿದ್ದೇವೆ. ಅಲ್ಲದೇ, ಪೌರಾಡಳಿತ ನಿರ್ದೇಶನಾಲಯಕ್ಕೂ ಪತ್ರ ಬರೆಯಲಾಗಿತ್ತು. ಕೂಲಂಕಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನಾಲಯವು ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ನಾಲ್ಕು ತಿಂಗಳಾದರೂ ಜಿಲ್ಲಾಧಿಕಾರಿಗಳು ಏನನ್ನೂ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.</p>.<p>15 ದಿನಗಳಲ್ಲಿ ಮನವಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣಗೌಡ ಆರ್. ಪಾಟೀಲ ಗುಳ್ಯಾಳ ಹೇಳಿದರು.</p>.<p>ಮುಖಂಡರಾದ ಜಗದೀಶ ಬಳ್ಳಾರಿ, ದೌಲತರಾಯ ಕುಂಬಾರ, ಶೇಖರ್ ಸಿಂಗ್, ಕಿರಣ ರಾಠೋಡ, ಶಿವುಕುಮಾರ, ದೌಲಾ ಮಲಿಕ್, ಸಂದೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಜಿಲ್ಲೆಯ ಜೇವರ್ಗಿ ಪಟ್ಟಣದ ಉದ್ಯಾನಗಳನ್ನು ಅತಿಕ್ರಮಣ ಮಾಡಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಜೇವರ್ಗಿ ತಾಲ್ಲೂಕು ಘಟಕದ ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುದು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಪುರಸಭೆ ವ್ಯಾಪ್ತಿಯಲ್ಲಿ ಬರುವ 18 ಉದ್ಯಾನಗಳನ್ನು ಅತಿಕ್ರಮಣ ಮಾಡಿಕೊಂಡು 176 ಕಟ್ಟಡ ಕಟ್ಟಲಾಗಿದೆ. ಇವುಗಳಿಗೆ ಯಾವುದೇ ದಾಖಲೆಗಳಿಲ್ಲ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಲ್ಲಿನ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿದ್ದಾರೆ. ಅನಿವಾರ್ಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬರಬೇಕಾಯಿತು ಎಂದು ಪ್ರತಿಭಟನಾಕಾರರು ದೂರಿದರು.</p>.<p>ಪುರಸಭೆಯ ಆರು ಸಿಬ್ಬಂದಿಯೂ ಇದರಲ್ಲಿ ಶಾಮೀಲಾಗಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ಹಿಂದೆ 65 ದಿನಗಳ ಕಾಲ ನಿರಂತರ ಧರಣಿ ನಡೆಸಿದ್ದೇವೆ. ಅಲ್ಲದೇ, ಪೌರಾಡಳಿತ ನಿರ್ದೇಶನಾಲಯಕ್ಕೂ ಪತ್ರ ಬರೆಯಲಾಗಿತ್ತು. ಕೂಲಂಕಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನಾಲಯವು ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ನಾಲ್ಕು ತಿಂಗಳಾದರೂ ಜಿಲ್ಲಾಧಿಕಾರಿಗಳು ಏನನ್ನೂ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.</p>.<p>15 ದಿನಗಳಲ್ಲಿ ಮನವಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣಗೌಡ ಆರ್. ಪಾಟೀಲ ಗುಳ್ಯಾಳ ಹೇಳಿದರು.</p>.<p>ಮುಖಂಡರಾದ ಜಗದೀಶ ಬಳ್ಳಾರಿ, ದೌಲತರಾಯ ಕುಂಬಾರ, ಶೇಖರ್ ಸಿಂಗ್, ಕಿರಣ ರಾಠೋಡ, ಶಿವುಕುಮಾರ, ದೌಲಾ ಮಲಿಕ್, ಸಂದೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>