ಈ ಸದರ್ಭದಲ್ಲಿ ಮಾತನಾಡಿದ ಸಂಘಟನೆಯ ನಗರ ಕಾರ್ಯದರ್ಶಿ ದಶರಥ ರಾಠೋಡ, ‘ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಸ್ಪಾಸ್ ಹಣ ನೀಡುವುದೂ ಆಗುತ್ತಿಲ್ಲ. ಹೀಗಾಗಿ, ಬಜೆಟ್ನಲ್ಲಿ ಘೋಷಣೆ ಮಾಡಿದ್ದಂತೆ ಸರ್ಕಾರ ಎಸ್ಸಿ, ಎಸ್ಟಿ ಸೇರಿದಂತೆ ಎಲ್ಲ ಜಾತಿ, ಧರ್ಮದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕು’ ಎಂದು ಒತ್ತಾಯಿಸಿದರು.