ಎಫ್ಡಿಎ ಅಖಿಲ್ ಹಾಗೂ ಅಟೆಂಡರ್ ಮುನ್ನಾಭಾಯಿ ಎಸಿಬಿ ಬಲೆಗೆ ಬಿದ್ದವರು. ಚಿಂಚೋಳಿ ಡಿಪೊದಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಧರ ಎಂಬುವವರು ಕುಟುಂಬದವರ ಆರೋಗ್ಯ ಸಮಸ್ಯೆಯಿಂದ 13 ತಿಂಗಳು ರಜೆ ಹಾಕಿದ್ದರು. ಗೈರು ಹಾಜರಿ ಎಂದು ಪರಿಗಣಿಸದೇ ಬಾಕಿ ವೇತನವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಮುಕ್ತಾಯಗೊಳಿಸಬೇಕು ಎಂದರೆ ₹ 25 ಸಾವಿರ ನೀಡಬೇಕು ಎಂದು ಅಖಿಲ್ ಹಾಗೂ ಮುನ್ನಾಭಾಯಿ ಬೇಡಿಕೆ ಇಟ್ಟಿದ್ದರು. ವಿದ್ಯಾಧರ ಅವರು ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದರು.