<p><strong>ಕಲಬುರ್ಗಿ: </strong>ಇಲ್ಲಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಡಿಪೊ–1ರಲ್ಲಿ ಪ್ರಥಮ ಸರ್ಜೆ ಸಹಾಯಕ ಹಾಗೂ ಅಟೆಂಡರ್ ₹ 25 ಸಾವಿರ ಲಂಚ ಪಡೆಯುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಳಿ ಮಾಡಿ ಹಣವನ್ನು ವಶಪಡಿಸಿಕೊಂಡು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಎಫ್ಡಿಎ ಅಖಿಲ್ ಹಾಗೂ ಅಟೆಂಡರ್ ಮುನ್ನಾಭಾಯಿ ಎಸಿಬಿ ಬಲೆಗೆ ಬಿದ್ದವರು. ಚಿಂಚೋಳಿ ಡಿಪೊದಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಧರ ಎಂಬುವವರು ಕುಟುಂಬದವರ ಆರೋಗ್ಯ ಸಮಸ್ಯೆಯಿಂದ 13 ತಿಂಗಳು ರಜೆ ಹಾಕಿದ್ದರು. ಗೈರು ಹಾಜರಿ ಎಂದು ಪರಿಗಣಿಸದೇ ಬಾಕಿ ವೇತನವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಮುಕ್ತಾಯಗೊಳಿಸಬೇಕು ಎಂದರೆ ₹ 25 ಸಾವಿರ ನೀಡಬೇಕು ಎಂದು ಅಖಿಲ್ ಹಾಗೂ ಮುನ್ನಾಭಾಯಿ ಬೇಡಿಕೆ ಇಟ್ಟಿದ್ದರು. ವಿದ್ಯಾಧರ ಅವರು ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಇಲ್ಲಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಡಿಪೊ–1ರಲ್ಲಿ ಪ್ರಥಮ ಸರ್ಜೆ ಸಹಾಯಕ ಹಾಗೂ ಅಟೆಂಡರ್ ₹ 25 ಸಾವಿರ ಲಂಚ ಪಡೆಯುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಳಿ ಮಾಡಿ ಹಣವನ್ನು ವಶಪಡಿಸಿಕೊಂಡು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಎಫ್ಡಿಎ ಅಖಿಲ್ ಹಾಗೂ ಅಟೆಂಡರ್ ಮುನ್ನಾಭಾಯಿ ಎಸಿಬಿ ಬಲೆಗೆ ಬಿದ್ದವರು. ಚಿಂಚೋಳಿ ಡಿಪೊದಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಧರ ಎಂಬುವವರು ಕುಟುಂಬದವರ ಆರೋಗ್ಯ ಸಮಸ್ಯೆಯಿಂದ 13 ತಿಂಗಳು ರಜೆ ಹಾಕಿದ್ದರು. ಗೈರು ಹಾಜರಿ ಎಂದು ಪರಿಗಣಿಸದೇ ಬಾಕಿ ವೇತನವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಮುಕ್ತಾಯಗೊಳಿಸಬೇಕು ಎಂದರೆ ₹ 25 ಸಾವಿರ ನೀಡಬೇಕು ಎಂದು ಅಖಿಲ್ ಹಾಗೂ ಮುನ್ನಾಭಾಯಿ ಬೇಡಿಕೆ ಇಟ್ಟಿದ್ದರು. ವಿದ್ಯಾಧರ ಅವರು ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>