<p><strong>ಕಲಬುರ್ಗಿ: </strong>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಹಿಂಬದಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಸ್ಪಿ ವಿ.ಎಂ. ಜ್ಯೋತಿ ನೇತೃತ್ವದ ಅಧಿಕಾರಿಗಳ ತಂಡವು ಉಪನೋಂದಣಾಧಿಕಾರಿ ಎಂ.ಎ.ಆಸೀಫ್ ಅವರಿಗೆ ಸೇರಿದ ಕಾರಿನಲ್ಲಿದ್ದ ₹ 86 ಸಾವಿರ ಹಣವನ್ನು ಜಪ್ತಿ ಮಾಡಿದೆ.</p>.<p>‘ಸಾರ್ವಜನಿಕರು ತಮ್ಮ ಪ್ರತಿಯೊಂದು ಕೆಲಸಕ್ಕೂ ಲಂಚ ಕೊಡಬೇಕಾಗಿದೆ. ಏಜೆಂಟರ ಹಾವಳಿ ಹೆಚ್ಚಾಗಿದೆ’ ಎಂಬ ದೂರುಗಳು ಎಸಿಬಿ ಅಧಿಕಾರಿಗಳಿಗೆ ಸಲ್ಲಿಕೆಯಾಗಿದ್ದವು. ದೂರನ್ನು ಆಧರಿಸಿ ಎಸಿಬಿ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಸಂಜೆಯವರೆಗೆ ಕಚೇರಿಯನ್ನು ಸಂಪೂರ್ಣ ತಪಾಸಣೆ ಮಾಡಿತು.</p>.<p>ದಾಳಿ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಎಸಿಬಿ ಎಸ್ಪಿ ವಿ.ಎಂ.ಜ್ಯೋತಿ, ‘ದಾಳಿ ವೇಳೆ ಸಮರ್ಪಕ ದಾಖಲೆ ಇಲ್ಲದ ₹ 86 ಸಾವಿರ ನಗದನ್ನು ವಶಪಡಿಸಿಕೊಂಡಿದ್ದೇವೆ. ನಮ್ಮ ಸ್ವಂತ ಹಣವಾಗಿದ್ದರೆ ಅದನ್ನು ಕಚೇರಿಯ ಡ್ರಾಯರ್ ಹಾಗೂ ಕಾರಿನಲ್ಲಿ ಇಡುವುದಿಲ್ಲ. ಈ ಹಣ ಕಾರಿನಲ್ಲಿ ಸಿಕ್ಕಿರುವುದರಿಂದ ಕಚೇರಿ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಹಿಂಬದಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಸ್ಪಿ ವಿ.ಎಂ. ಜ್ಯೋತಿ ನೇತೃತ್ವದ ಅಧಿಕಾರಿಗಳ ತಂಡವು ಉಪನೋಂದಣಾಧಿಕಾರಿ ಎಂ.ಎ.ಆಸೀಫ್ ಅವರಿಗೆ ಸೇರಿದ ಕಾರಿನಲ್ಲಿದ್ದ ₹ 86 ಸಾವಿರ ಹಣವನ್ನು ಜಪ್ತಿ ಮಾಡಿದೆ.</p>.<p>‘ಸಾರ್ವಜನಿಕರು ತಮ್ಮ ಪ್ರತಿಯೊಂದು ಕೆಲಸಕ್ಕೂ ಲಂಚ ಕೊಡಬೇಕಾಗಿದೆ. ಏಜೆಂಟರ ಹಾವಳಿ ಹೆಚ್ಚಾಗಿದೆ’ ಎಂಬ ದೂರುಗಳು ಎಸಿಬಿ ಅಧಿಕಾರಿಗಳಿಗೆ ಸಲ್ಲಿಕೆಯಾಗಿದ್ದವು. ದೂರನ್ನು ಆಧರಿಸಿ ಎಸಿಬಿ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಸಂಜೆಯವರೆಗೆ ಕಚೇರಿಯನ್ನು ಸಂಪೂರ್ಣ ತಪಾಸಣೆ ಮಾಡಿತು.</p>.<p>ದಾಳಿ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಎಸಿಬಿ ಎಸ್ಪಿ ವಿ.ಎಂ.ಜ್ಯೋತಿ, ‘ದಾಳಿ ವೇಳೆ ಸಮರ್ಪಕ ದಾಖಲೆ ಇಲ್ಲದ ₹ 86 ಸಾವಿರ ನಗದನ್ನು ವಶಪಡಿಸಿಕೊಂಡಿದ್ದೇವೆ. ನಮ್ಮ ಸ್ವಂತ ಹಣವಾಗಿದ್ದರೆ ಅದನ್ನು ಕಚೇರಿಯ ಡ್ರಾಯರ್ ಹಾಗೂ ಕಾರಿನಲ್ಲಿ ಇಡುವುದಿಲ್ಲ. ಈ ಹಣ ಕಾರಿನಲ್ಲಿ ಸಿಕ್ಕಿರುವುದರಿಂದ ಕಚೇರಿ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>