ಫೋರಂನ ಸಂಚಾಲನ ಸಮಿತಿ ಸದಸ್ಯ ಮೊಹಮ್ಮದ್ ಅಸಗರ ಚುಲಬುಲ್ ಹಾಗೂ ನಾಸಿರ್ ಮಾತನಾಡಿ, ‘ಸಮಾವೇಶಕ್ಕೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲದೇ ವಿಜಯಪುರ ಜಿಲ್ಲೆಯಿಂದ ಸಹಸ್ರಾರು ಜನರು ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಮೊಂಡುತನದ ವರ್ತನೆಯನ್ನು ವಿರೋಧಿಸುವ ಹಾಗೂ ಜನವಿರೋಧಿಯಾದ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯುವವರಿಗೂ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದು ತಿಳಿಸಿದರು.