<p><strong>ಕಲಬುರಗಿ</strong>: ಕಾರು–ಬೈಕ್ ನಡುವೆ ಸಂಭವಿಸಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನಿಗೆ ಅಫಜಲಪುರದ ಜೆಎಂಎಫ್ಸಿ ನ್ಯಾಯಾಲಯವು ಒಂದು ವರ್ಷ ಜೈಲು, ₹ 10 ಸಾವಿರ ದಂಡ ವಿಧಿಸಿದೆ.</p>.<p>ಅಫಜಲಪುರದ ಲಿಂಬಿತೋಟ ನಿವಾಸಿ ಸಂತೋಷ ಲಕ್ಷಣ ದರ್ಗಾಶಿರೂರ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>2021ರ ಜನವರಿ 20ರಂದು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅವಘಡದಲ್ಲಿ ಬೈಕ್ ಸವಾರ ಬಸವರಾಜ ಚವ್ಹಾಣ ಸ್ಥಳದಲ್ಲೇ ಅಸುನೀಗಿದ್ದರು. ಬಳಿಕ ಕಾರು ಸ್ಥಳದಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದ. ಈ ಸಂಬಂಧ ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖಾಧಿಕಾರಿಗಳಾಗಿದ್ದ ಭೀಮರತ್ನಾ ಹಾಗೂ ಜಗದೇವಪ್ಪ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಈ ಪ್ರಕರಣದಲ್ಲಿ ವಾದ–ಪ್ರತಿವಾದ ಆಲಿಸಿದ ಅಫಜಲಪುರ ಜೆಎಂಎಫ್ಸಿ ನ್ಯಾಯಾಧೀಶ ಅನೀಲ ಅಮಾಟೆ ಅವರು ಅಪರಾಧಿ ಸಂತೋಷಗೆ ಶಿಕ್ಷೆ, ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಶ್ರೀ ಪಿ. ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕಾರು–ಬೈಕ್ ನಡುವೆ ಸಂಭವಿಸಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನಿಗೆ ಅಫಜಲಪುರದ ಜೆಎಂಎಫ್ಸಿ ನ್ಯಾಯಾಲಯವು ಒಂದು ವರ್ಷ ಜೈಲು, ₹ 10 ಸಾವಿರ ದಂಡ ವಿಧಿಸಿದೆ.</p>.<p>ಅಫಜಲಪುರದ ಲಿಂಬಿತೋಟ ನಿವಾಸಿ ಸಂತೋಷ ಲಕ್ಷಣ ದರ್ಗಾಶಿರೂರ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>2021ರ ಜನವರಿ 20ರಂದು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅವಘಡದಲ್ಲಿ ಬೈಕ್ ಸವಾರ ಬಸವರಾಜ ಚವ್ಹಾಣ ಸ್ಥಳದಲ್ಲೇ ಅಸುನೀಗಿದ್ದರು. ಬಳಿಕ ಕಾರು ಸ್ಥಳದಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದ. ಈ ಸಂಬಂಧ ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖಾಧಿಕಾರಿಗಳಾಗಿದ್ದ ಭೀಮರತ್ನಾ ಹಾಗೂ ಜಗದೇವಪ್ಪ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಈ ಪ್ರಕರಣದಲ್ಲಿ ವಾದ–ಪ್ರತಿವಾದ ಆಲಿಸಿದ ಅಫಜಲಪುರ ಜೆಎಂಎಫ್ಸಿ ನ್ಯಾಯಾಧೀಶ ಅನೀಲ ಅಮಾಟೆ ಅವರು ಅಪರಾಧಿ ಸಂತೋಷಗೆ ಶಿಕ್ಷೆ, ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಶ್ರೀ ಪಿ. ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>