<p>ವಾಡಿ: ಕಲಬುರ್ಗಿ ತಾಲ್ಲೂಕಿನ ನಂದೂರು ಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಲ್ಲಿನ ಪುಸ್ತಕ ಅಂಗಡಿ ಮಾಲೀಕ ಮೃತಪಟ್ಟಿದ್ದಾರೆ.</p>.<p>ಪಟ್ಟಣದ ಗಾಂಧಿ ವೃತ್ತದಲ್ಲಿನ ಸ್ವಾಮಿ ಬುಕ್ಸ್ಟಾಲ್ ಮಾಲೀಕ ಶರಣಯ್ಯ ಸ್ವಾಮಿ ಸಾಲಿಮಠ (38) ಮೃತಪಟ್ಟವರು. ಬುಧವಾರ ಸಂಜೆ ವ್ಯಾಪಾರ ಮುಗಿಸಿಕೊಂಡು ಕಲಬುರ್ಗಿ ನಗರದ ತಮ್ಮ ಮನೆಗೆ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿಕ್ಕಿಯ ರಭಸಕ್ಕೆ ಶರಣಯ್ಯ ಸ್ವಾಮಿ ಅವರ ಎರಡೂ ಕಾಲುಗಳು ತುಂಡಾಗಿದ್ದವು. ಪ್ರಜ್ಞೆ ಕಳೆದುಕೊಂಡಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟರು. ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶರಣಯ್ಯ ಸ್ವಾಮಿ ಅವರಿಗೆ ತಂದೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ (ಜುಲೈ 2) ಮಧ್ಯಾಹ್ನ 12ಗಂಟೆಗೆ ನಾಲವಾರದ ಸ್ವಂತ ಹೊಲದಲ್ಲಿ ನೆರವೇರುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಾಡಿ: ಕಲಬುರ್ಗಿ ತಾಲ್ಲೂಕಿನ ನಂದೂರು ಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಲ್ಲಿನ ಪುಸ್ತಕ ಅಂಗಡಿ ಮಾಲೀಕ ಮೃತಪಟ್ಟಿದ್ದಾರೆ.</p>.<p>ಪಟ್ಟಣದ ಗಾಂಧಿ ವೃತ್ತದಲ್ಲಿನ ಸ್ವಾಮಿ ಬುಕ್ಸ್ಟಾಲ್ ಮಾಲೀಕ ಶರಣಯ್ಯ ಸ್ವಾಮಿ ಸಾಲಿಮಠ (38) ಮೃತಪಟ್ಟವರು. ಬುಧವಾರ ಸಂಜೆ ವ್ಯಾಪಾರ ಮುಗಿಸಿಕೊಂಡು ಕಲಬುರ್ಗಿ ನಗರದ ತಮ್ಮ ಮನೆಗೆ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿಕ್ಕಿಯ ರಭಸಕ್ಕೆ ಶರಣಯ್ಯ ಸ್ವಾಮಿ ಅವರ ಎರಡೂ ಕಾಲುಗಳು ತುಂಡಾಗಿದ್ದವು. ಪ್ರಜ್ಞೆ ಕಳೆದುಕೊಂಡಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟರು. ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶರಣಯ್ಯ ಸ್ವಾಮಿ ಅವರಿಗೆ ತಂದೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ (ಜುಲೈ 2) ಮಧ್ಯಾಹ್ನ 12ಗಂಟೆಗೆ ನಾಲವಾರದ ಸ್ವಂತ ಹೊಲದಲ್ಲಿ ನೆರವೇರುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>