ನ.26ರಂದು ಬೆಳಿಗ್ಗೆ ಪುತ್ರನ ಬೈಕ್ ಮೇಲೆ ಊರ ಸಮೀಪ ಸಂಚರಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕಲಬುರ್ಗಿ ಬಳಿಕ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಪತ್ರಿಕೆ ಜೊತೆಗೆ ಹಾಲು ವಿತರಣೆಯನ್ನೂ ಮಾಡುತ್ತಿದ್ದರು.