ಕಲಬುರಗಿ ತಾಲ್ಲೂಕಿನ ಬೆಲೂರ (ಜೆ) ನಿವಾಸಿಗಳಾದ ಗುರುನಾಥ ತಿಮ್ಮಣ್ಣ (45) ಮತ್ತು ಅವರ ಅಕ್ಕನ ಮಗಳು ಸಂಗೀತಾ ಶಂಕರ (32) ಮೃತಪಟ್ಟಿದ್ದಾರೆ. ಲಕ್ಷ್ಮಣ ಭೀಮಶಾ (35) ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಯಳಂಬಿ ಗ್ರಾಮದಲ್ಲಿ ನಡೆಯಲಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೈಕ್ ಮೂಲಕ ತೆರಳುತ್ತಿದ್ದರು. ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ.
ಕಲಬುರಗಿ ಸಂಚಾರ ಪೊಲೀಸ್ ಠಾಣೆ- 2ರಲ್ಲಿ ಪ್ರಕರಣ ದಾಖಲಾಗಿದೆ.