ವೈಜನಾಥ ಅವರ ಸಿಐಡಿ ಕಸ್ಟಡಿ ಶುಕ್ರವಾರ (ಮೇ 13)ಕ್ಕೆ ಮುಗಿದ ಕಾರಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 3ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಧೀಶರಾದ ಬಸವರಾಜ ನೇಸರ್ಗಿ ಅವರು ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ಅವರು ಸಿಐಡಿ ಪರ ವಾದ ಮಂಡಿಸಿದರು.