ಈ ಬಗ್ಗೆ ಎಂಜಿನಿಯರ್ ಬಾಬುರಾವ್ ಜ್ಯೋತಿ ಅವರನ್ನ ವಿಚಾರಿಸಿದಾಗ, ‘ಮಾಶಾಳ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತೇನೆ. ಹೊಸದಾಗಿ ಕೊಳವೆಬಾವಿ ಕೊರೆಯಲು ಅವಕಾಶವಿದ್ದರೆ ಕೊರೆಯಲಾಗುವುದು. ಯಾರಾದರೂ ಖಾಸಗಿಯಾಗಿ ನೀರು ಕೊಡುತ್ತಿದ್ದರೆ, ಅವರಿಂದ ಪಡೆದು ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ಬಗ್ಗೆ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು’ ಎಂದರು.