<p><strong>ಅಫಜಲಪುರ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳುವುದು ಅಗತ್ಯವಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಎಸ್.ಗಡಿಗಿಮನಿ ಹಾಗೂ ಕೃಷಿ ಅಧಿಕಾರಿ ಆನಂದ ಅವರಾದ ತಿಳಿಸಿದರು.</p>.<p>ಈ ಕುರಿತು ಮಾಹಿತಿ <strong>‘ಪ್ರಜಾವಾಣಿ’</strong>ಗೆ ಮಾಹಿತಿ ನೀಡುವರು ಈಗಾಗಲೇ ತಾಲ್ಲೂಕಿನ ಅತನೂರು, ಕರಜಿಗಿ ಹಾಗೂ ಅಫಜಲಪುರ ಸಂಪರ್ಕ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಇ–ಕೆವೈಸಿ ಮಾಡಿಕೊಳ್ಳುವುದು ಆರಂಭವಾಗಿದೆ. ತಪ್ಪದೆ ರೈತರು ತಮ್ಮ ತಮ್ಮ ವ್ಯಾಪ್ತಿಗೆ ಬರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯಗಳನ್ನು ದಾಖಲೆಗಳನ್ನು ನೀಡಿ ಇ–ಕೆವೈಸಿ ಮಾಡಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಪಹಣಿ, ಖಾತೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ವಿವರಗಳಲ್ಲಿ ಹೊಂದಾಣಿಕೆ ಇಲ್ಲದಿರುವುದರಿಂದ ಪಿಎಂ ಕಿಸಾನ್ ಸೇರಿದಂತೆ ಹಲವು ಯೋಜನೆಗಳ ಅನುದಾನ ಪಡೆಯಲು ರೈತರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ರೈತರು ತಕ್ಷಣ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಬೇಕು’ ಎಂದರು.</p>.<p>‘ಭೂ ದಾಖಲೆಗಳಲ್ಲಿ ದೋಷಗಳಿದ್ದರೆ ಹತ್ತಿರದ ನಾಡ ಕಚೇರಿ, ಗ್ರಾಮ ಪಂಚಾಯಿತಿ ಅಥವಾ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬೇಕು. ದಾಖಲೆಗಳು ಸರಿಯಾಗಿದ್ದರೆ ಮಾತ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಲಭಿಸುತ್ತವೆ’ ಎಂದರು.</p>.<p>ಈ ವೇಳೆ ಅನುಗಾರರಾದ ಲಿಂಗರಾಜ ಸಗರ್, ಸುಭಾಷ್ ಕಾಂಬಳೆ, ಮಡಿವಾಳಪ್ಪ ಹೋಳ್ಕರ್, ಸಿದ್ದು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳುವುದು ಅಗತ್ಯವಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಎಸ್.ಗಡಿಗಿಮನಿ ಹಾಗೂ ಕೃಷಿ ಅಧಿಕಾರಿ ಆನಂದ ಅವರಾದ ತಿಳಿಸಿದರು.</p>.<p>ಈ ಕುರಿತು ಮಾಹಿತಿ <strong>‘ಪ್ರಜಾವಾಣಿ’</strong>ಗೆ ಮಾಹಿತಿ ನೀಡುವರು ಈಗಾಗಲೇ ತಾಲ್ಲೂಕಿನ ಅತನೂರು, ಕರಜಿಗಿ ಹಾಗೂ ಅಫಜಲಪುರ ಸಂಪರ್ಕ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಇ–ಕೆವೈಸಿ ಮಾಡಿಕೊಳ್ಳುವುದು ಆರಂಭವಾಗಿದೆ. ತಪ್ಪದೆ ರೈತರು ತಮ್ಮ ತಮ್ಮ ವ್ಯಾಪ್ತಿಗೆ ಬರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯಗಳನ್ನು ದಾಖಲೆಗಳನ್ನು ನೀಡಿ ಇ–ಕೆವೈಸಿ ಮಾಡಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಪಹಣಿ, ಖಾತೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ವಿವರಗಳಲ್ಲಿ ಹೊಂದಾಣಿಕೆ ಇಲ್ಲದಿರುವುದರಿಂದ ಪಿಎಂ ಕಿಸಾನ್ ಸೇರಿದಂತೆ ಹಲವು ಯೋಜನೆಗಳ ಅನುದಾನ ಪಡೆಯಲು ರೈತರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ರೈತರು ತಕ್ಷಣ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಬೇಕು’ ಎಂದರು.</p>.<p>‘ಭೂ ದಾಖಲೆಗಳಲ್ಲಿ ದೋಷಗಳಿದ್ದರೆ ಹತ್ತಿರದ ನಾಡ ಕಚೇರಿ, ಗ್ರಾಮ ಪಂಚಾಯಿತಿ ಅಥವಾ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬೇಕು. ದಾಖಲೆಗಳು ಸರಿಯಾಗಿದ್ದರೆ ಮಾತ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಲಭಿಸುತ್ತವೆ’ ಎಂದರು.</p>.<p>ಈ ವೇಳೆ ಅನುಗಾರರಾದ ಲಿಂಗರಾಜ ಸಗರ್, ಸುಭಾಷ್ ಕಾಂಬಳೆ, ಮಡಿವಾಳಪ್ಪ ಹೋಳ್ಕರ್, ಸಿದ್ದು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>