<blockquote>5 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮ | ಜೆಜೆಎಂ ಕಳಪೆ ಕಾಮಗಾರಿ: ಗ್ರಾಮಸ್ಥರ ಆರೋಪ | ಶುದ್ಧ ಕುಡಿಯುವ ನೀರಿನ ಘಟಕ ಬಂದ್</blockquote>.<p><strong>ಅಫಜಲಪುರ:</strong> ಸಮೀಪದ ಬಳೂರ್ಗಿ ಗ್ರಾಮದಲ್ಲಿ ಜಲಮೂಲಗಳು ಸಾಕಷ್ಟಿವೆ. ಆದರೆ ಸೂಕ್ತ ಬಳಕೆ, ನಿರ್ವಹಣೆ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.</p>.<p>ಸುಮಾರು 5 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿರುವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಈವರೆಗೆ ಗ್ರಾ.ಪಂಗೆ ನಿರ್ವಹಣೆ ಮಾಡಲು ಹಸ್ತಾಂತರಿಸಿಲ್ಲ. ಇದು ನೀರಿನ ಸಮಸ್ಯೆಗೆ ಕಾರಣವಾಗಿದೆ.</p>.<p>ಜೆಜೆಎಂ ಕಾಮಗಾರಿ ಕಳಪೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹರಿಬಿಡಲಾಗುತ್ತಿದೆ. ಈ ಸಂಬಂಧ ಅನೇಕ ಬಾರಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗ್ರಾ.ಪಂಗೆ ಈವರೆಗೆ ಕುಡಿಯುವ ನೀರಿಗಾಗಿ ಸರ್ಕಾರ ಅನುದಾನ ನೀಡಿಲ್ಲ. ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮುಗಿದಿದೆ. ಅದನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು. ಅವರು ಹಸ್ತಾಂತರ ಮಾಡಿದ ತಕ್ಷಣ ನಿರ್ವಹಣೆ ಮಾಡಲಾಗುವುದು. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ’ ಎಂದು ಪಿಡಿಒ ಸಂತೋಷ ಬೂಸನೂರ ವಿವರಿಸಿದರು.</p>.<p>ಗ್ರಾಮದ ಪಕ್ಕದಲ್ಲಿರುವ ಕೆರೆಯಲ್ಲಿ ಕಳೆದ ವರ್ಷ ಕೊಳವೆಬಾವಿ ಕೊರೆಯಲಾಗಿದೆ. ಗ್ರಾಮ ಪಂಚಾಯತಿ ಕೊಳವೆಬಾವಿಗೆ ಪಂಪ್ಸೆಟ್ ಅಳವಡಿಸಿದರೆ ಮಡ್ಡಿ ಮೇಲಿನ ಮನೆಗಳಿಗೆ ಅನುಕೂಲವಾಗುತ್ತದೆ ಎಂದು ಗ್ರಾಮದ ಮುಖಂಡ ಶಿವಪ್ಪ ಪೂಜಾರಿ ಹೇಳಿದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ಗಳನ್ನು ಕೆಲವರು ಮಧ್ಯದಲ್ಲಿ ಒಡೆದು ನೀರು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಧಿಕಾರಿಗಳು ಮೌನವಹಿಸಿದ್ದಾರೆ.</p>.<p>ಇದರಿಂದಾಗಿ ಗ್ರಾಮದ ಬಡವರಿಗೆ ಕುಡಿಯುವ ನೀರು ದೊರೆಯುತ್ತಿಲ್ಲ ಎಂದು ಗ್ರಾಮದ ಕೆಲವರು ಆರೋಪಿಸಿದರು.</p>.<p>ಗ್ರಾಮದಲ್ಲಿ 5 ವರ್ಷಗಳ ಹಿಂದೆಯೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಆದರೆ ನಿರ್ವಹಣೆ ಕೊರತೆಯಿಂದ ಅದು ಹಾಳಾಗಿದೆ. ಅದರ ಬಿಡಿಭಾಗಗಳು ಕಳುವಾಗಿದೆ. ಬೇಸಿಗೆ ಸಂದರ್ಭದಲ್ಲೂ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿಲ್ಲ. ಯಾವುದೇ ಕ್ರಮ ಕೂಡ ಕೈಗೊಂಡಿಲ್ಲ. ಸರ್ಕಾರದ ಸಂಪತ್ತು ಹಾಳಾಗಲು ಅಧಿಕಾರಿಗಳೇ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<div><blockquote>ನಂದಿ ಬಸವೇಶ್ವರ ಜಾತ್ರೆ ಸಮೀಪಿಸಿದ್ದು, ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆಯಿದೆ. ಕೊಳವೆ ಬಾವಿಗಳು ಕೆಟ್ಟು ನಿಂತರೆ ಅಧಿಕಾರಿಗಳು ತಕ್ಷಣ ದುರಸ್ತಿಗೊಳಿಸಬೇಕು</blockquote><span class="attribution">ಚನ್ನಬಸಪ್ಪ ಚಾಕೊಂಡಿ, ನಂದಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷ</span></div>.<div><blockquote>ಮೇಲಧಿಕಾರಿಗಳು ಕಾಮಗಾರಿ ಕುರಿತು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಗ್ರಾ.ಪಂನವರಿಗೆ ಹಸ್ತಾಂತರಿಸಿ, ಕುಡಿಯುವ ನೀರು ಪೂರೈಕೆಗೆ ಶೀಘ್ರ ವ್ಯವಸ್ಥೆ ಮಾಡಲಾಗುತ್ತದೆ</blockquote><span class="attribution">ಮೋಹನ್ ಚೌಹಾಣ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗದ ಸಹಾಯಕ ಎಂಜಿನಿಯರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>5 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮ | ಜೆಜೆಎಂ ಕಳಪೆ ಕಾಮಗಾರಿ: ಗ್ರಾಮಸ್ಥರ ಆರೋಪ | ಶುದ್ಧ ಕುಡಿಯುವ ನೀರಿನ ಘಟಕ ಬಂದ್</blockquote>.<p><strong>ಅಫಜಲಪುರ:</strong> ಸಮೀಪದ ಬಳೂರ್ಗಿ ಗ್ರಾಮದಲ್ಲಿ ಜಲಮೂಲಗಳು ಸಾಕಷ್ಟಿವೆ. ಆದರೆ ಸೂಕ್ತ ಬಳಕೆ, ನಿರ್ವಹಣೆ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.</p>.<p>ಸುಮಾರು 5 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿರುವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಈವರೆಗೆ ಗ್ರಾ.ಪಂಗೆ ನಿರ್ವಹಣೆ ಮಾಡಲು ಹಸ್ತಾಂತರಿಸಿಲ್ಲ. ಇದು ನೀರಿನ ಸಮಸ್ಯೆಗೆ ಕಾರಣವಾಗಿದೆ.</p>.<p>ಜೆಜೆಎಂ ಕಾಮಗಾರಿ ಕಳಪೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹರಿಬಿಡಲಾಗುತ್ತಿದೆ. ಈ ಸಂಬಂಧ ಅನೇಕ ಬಾರಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗ್ರಾ.ಪಂಗೆ ಈವರೆಗೆ ಕುಡಿಯುವ ನೀರಿಗಾಗಿ ಸರ್ಕಾರ ಅನುದಾನ ನೀಡಿಲ್ಲ. ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮುಗಿದಿದೆ. ಅದನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು. ಅವರು ಹಸ್ತಾಂತರ ಮಾಡಿದ ತಕ್ಷಣ ನಿರ್ವಹಣೆ ಮಾಡಲಾಗುವುದು. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ’ ಎಂದು ಪಿಡಿಒ ಸಂತೋಷ ಬೂಸನೂರ ವಿವರಿಸಿದರು.</p>.<p>ಗ್ರಾಮದ ಪಕ್ಕದಲ್ಲಿರುವ ಕೆರೆಯಲ್ಲಿ ಕಳೆದ ವರ್ಷ ಕೊಳವೆಬಾವಿ ಕೊರೆಯಲಾಗಿದೆ. ಗ್ರಾಮ ಪಂಚಾಯತಿ ಕೊಳವೆಬಾವಿಗೆ ಪಂಪ್ಸೆಟ್ ಅಳವಡಿಸಿದರೆ ಮಡ್ಡಿ ಮೇಲಿನ ಮನೆಗಳಿಗೆ ಅನುಕೂಲವಾಗುತ್ತದೆ ಎಂದು ಗ್ರಾಮದ ಮುಖಂಡ ಶಿವಪ್ಪ ಪೂಜಾರಿ ಹೇಳಿದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ಗಳನ್ನು ಕೆಲವರು ಮಧ್ಯದಲ್ಲಿ ಒಡೆದು ನೀರು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಧಿಕಾರಿಗಳು ಮೌನವಹಿಸಿದ್ದಾರೆ.</p>.<p>ಇದರಿಂದಾಗಿ ಗ್ರಾಮದ ಬಡವರಿಗೆ ಕುಡಿಯುವ ನೀರು ದೊರೆಯುತ್ತಿಲ್ಲ ಎಂದು ಗ್ರಾಮದ ಕೆಲವರು ಆರೋಪಿಸಿದರು.</p>.<p>ಗ್ರಾಮದಲ್ಲಿ 5 ವರ್ಷಗಳ ಹಿಂದೆಯೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಆದರೆ ನಿರ್ವಹಣೆ ಕೊರತೆಯಿಂದ ಅದು ಹಾಳಾಗಿದೆ. ಅದರ ಬಿಡಿಭಾಗಗಳು ಕಳುವಾಗಿದೆ. ಬೇಸಿಗೆ ಸಂದರ್ಭದಲ್ಲೂ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿಲ್ಲ. ಯಾವುದೇ ಕ್ರಮ ಕೂಡ ಕೈಗೊಂಡಿಲ್ಲ. ಸರ್ಕಾರದ ಸಂಪತ್ತು ಹಾಳಾಗಲು ಅಧಿಕಾರಿಗಳೇ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<div><blockquote>ನಂದಿ ಬಸವೇಶ್ವರ ಜಾತ್ರೆ ಸಮೀಪಿಸಿದ್ದು, ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆಯಿದೆ. ಕೊಳವೆ ಬಾವಿಗಳು ಕೆಟ್ಟು ನಿಂತರೆ ಅಧಿಕಾರಿಗಳು ತಕ್ಷಣ ದುರಸ್ತಿಗೊಳಿಸಬೇಕು</blockquote><span class="attribution">ಚನ್ನಬಸಪ್ಪ ಚಾಕೊಂಡಿ, ನಂದಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷ</span></div>.<div><blockquote>ಮೇಲಧಿಕಾರಿಗಳು ಕಾಮಗಾರಿ ಕುರಿತು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಗ್ರಾ.ಪಂನವರಿಗೆ ಹಸ್ತಾಂತರಿಸಿ, ಕುಡಿಯುವ ನೀರು ಪೂರೈಕೆಗೆ ಶೀಘ್ರ ವ್ಯವಸ್ಥೆ ಮಾಡಲಾಗುತ್ತದೆ</blockquote><span class="attribution">ಮೋಹನ್ ಚೌಹಾಣ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗದ ಸಹಾಯಕ ಎಂಜಿನಿಯರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>