<p>ಅಫಜಲಪುರ: ತಾಲ್ಲೂಕಿನ ಗೊಬ್ಬುರ್ (ಬಿ) ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬೈಕ್ ಮತ್ತು ವಾಹನವೊಂದರ ನಡುವೆ ಶನಿವಾರ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ, ಕೆಎಸ್ಆರ್ಪಿ ಕಾನ್ಸ್ಟೆಬಲ್ವೊಬ್ಬರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಶಿರವಾಳ ಗ್ರಾಮದ ಧರೆಪ್ಪ ಅಂಜುಟಗಿ (25) ಮೃತರು.</p>.<p>ಧರೆಪ್ಪ ತಮ್ಮ ತಂದೆಗೆ ಶಿರವಾಳದಿಂದ ಬುತ್ತಿ ತರಲು ಹೇಳಿ, ಅದನ್ನು ತೆಗೆದುಕೊಳ್ಳಲು ಸ್ನೇಹಿತನ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಅಫಜಲಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಬ್ಬುರ್ (ಬಿ) ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>‘ಅಪಘಾತಕ್ಕೆ ಕಾರಣನಾದ ಅಪರಿಚಿತ ವಾಹನ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೃತ ಧರೆಪ್ಪ ಅವರ ತಂದೆ ವಿಜಯ ಕುಮಾರ ಅಂಜುಟಗಿ ಅವರು ದೇವಲ ಗಾಣಗಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಅವರ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಲಖನ್ ಮಸಗುಪ್ಪಿ ಹಾಗೂ ಪಿಎಸ್ಐ ಸಂಗೀತಾ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-31-534070760</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ತಾಲ್ಲೂಕಿನ ಗೊಬ್ಬುರ್ (ಬಿ) ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬೈಕ್ ಮತ್ತು ವಾಹನವೊಂದರ ನಡುವೆ ಶನಿವಾರ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ, ಕೆಎಸ್ಆರ್ಪಿ ಕಾನ್ಸ್ಟೆಬಲ್ವೊಬ್ಬರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಶಿರವಾಳ ಗ್ರಾಮದ ಧರೆಪ್ಪ ಅಂಜುಟಗಿ (25) ಮೃತರು.</p>.<p>ಧರೆಪ್ಪ ತಮ್ಮ ತಂದೆಗೆ ಶಿರವಾಳದಿಂದ ಬುತ್ತಿ ತರಲು ಹೇಳಿ, ಅದನ್ನು ತೆಗೆದುಕೊಳ್ಳಲು ಸ್ನೇಹಿತನ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಅಫಜಲಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಬ್ಬುರ್ (ಬಿ) ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>‘ಅಪಘಾತಕ್ಕೆ ಕಾರಣನಾದ ಅಪರಿಚಿತ ವಾಹನ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೃತ ಧರೆಪ್ಪ ಅವರ ತಂದೆ ವಿಜಯ ಕುಮಾರ ಅಂಜುಟಗಿ ಅವರು ದೇವಲ ಗಾಣಗಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಅವರ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಲಖನ್ ಮಸಗುಪ್ಪಿ ಹಾಗೂ ಪಿಎಸ್ಐ ಸಂಗೀತಾ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-31-534070760</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>