<p><strong>ಅಫಜಲಪುರ:</strong> ತಾಲ್ಲೂಕಿನ ಚಿಣಮಗೇರಿ ಹಾಗೂ ಚೌಡಾಪುರ ಸೀಮೆಯಲ್ಲಿರುವ ಮಹಾಂತಪುರದಲ್ಲಿ ಮಹಾ ತಪಸ್ವಿ ಗುರು ಮಹಾಂತೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಂಜೆ ಸಂಭ್ರಮದ ಚಿನ್ಮಯಗಿರಿಯ ಗುರು ಮಹಾಂತೇಶ್ವರರ ಭವ್ಯ ರಥೋತ್ಸವ ಜರುಗಿತು.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಗುರು ಮಹಾಂತೇಶ್ವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳೆದ 5 ದಿನಗಳಿಂದ ಮಠಕ್ಕೆ ಸಹಸ್ರಾರು ಭಕ್ತರು ಬಂದು ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ಭಕ್ತರಿಗಾಗಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಸಂಜೆ ಮಠದ ಭಕ್ತಾದಿಗಳು ರಥವನ್ನು ಸಿಂಗರಿಸಿ ಪೂಜೆಯನ್ನು ಸಲ್ಲಿಸಿದರು. ನಂತರ ಅದ್ದೂರಿಯಾಗಿ ಜೋಡಿ ರಥೋತ್ಸವ ಕಾರ್ಯಕ್ರಮ ಜರುಗಿತು.</p>.<p>ಜ.31ರ ಶನಿವಾರದಂದು ಬೆಳಿಗ್ಗೆ 6 ಗಂಟೆಗೆ ಶಿವಯೋಗಿಗಳ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, 8 ಗಂಟೆಗೆ ಪಂಚಾಚಾರ್ಯರ ಧ್ವಜಾರೋಹಣ, ಜಾನುವಾರು ಜಾತ್ರೆ ಉದ್ಘಾಟನೆ, 11 ಗಂಟೆಗೆ ಉಚಿತ ಸಾಮೂಹಿಕ ವಿವಾಹ ಜರುಗಿದವು. ಸಂಜೆ ಶ್ರೀ ವೀರಭದ್ರೇಶ್ವರ ಪಲ್ಲಕ್ಕಿಯೊಂದಿಗೆ ಪಟ್ಟದಪುರವಂತರ ಆಗಮನ, ನಂತರ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಹಿಳಾ ಗೋಷ್ಠಿ ಜರುಗಿದವು.</p>.<p>ಸಂಜೆ 6 ಗಂಟೆಗೆ ಸೋಲಾಪುರ ಭಕ್ತರ ನಂದಿಕೋಲು ಮೆರವಣಿಗೆಯೊಂದಿಗೆ ಮಹಾಂತೇಶ್ವರರ ಭವ್ಯ ರಥೋತ್ಸವ ಜರುಗಿತು. ಮಹಾಂತ ಜ್ಯೋತಿ ಆಯುರ್ವೇದಿಕ ಆಸ್ಪತ್ರೆ ವತಿಯಿಂದ ಉಚಿತ ತಪಾಸಣಾ ಶಿಬಿರ ಜರುಗಿತು. ರಥೋತ್ಸವ ನಂತರ ಮದ್ದು ಸುಡುವ ಕಾರ್ಯಕ್ರಮ ಜರುಗಿತು. </p>.<p>ಕಾಯಕಯೋಗಿ ಶ್ರೀ ಸಿದ್ದರಾಮ ಶಿವಯೋಗಿಗಳ ಸಂಕಲ್ಪದಂತೆ ಉತ್ತಮ ಜಾನುವಾರುಗಳಿಗೆ ಬಹುಮಾನ ವಿತರಣೆ, ರಾತ್ರಿಯಿಡೀ ಖ್ಯಾತ ಸಂಗೀತ ಕಲಾವಿದರಿಂದ ಕಡಕೋಳ ಮಡಿವಾಳಪ್ಪನವರ ಹಾಡುಗಳ ಸಂಗೀತ ಕಾರ್ಯಕ್ರಮ ಜರುಗಿತು. ಜಾತ್ರಾ ಮಹೋತ್ಸವಕ್ಕೆ ದೇವಲ ಗಾಣಗಾಪುರ ಪೊಲೀಸ್ ಠಾಣೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ಚಿಣಮಗೇರಿ ಹಾಗೂ ಚೌಡಾಪುರ ಸೀಮೆಯಲ್ಲಿರುವ ಮಹಾಂತಪುರದಲ್ಲಿ ಮಹಾ ತಪಸ್ವಿ ಗುರು ಮಹಾಂತೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಂಜೆ ಸಂಭ್ರಮದ ಚಿನ್ಮಯಗಿರಿಯ ಗುರು ಮಹಾಂತೇಶ್ವರರ ಭವ್ಯ ರಥೋತ್ಸವ ಜರುಗಿತು.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಗುರು ಮಹಾಂತೇಶ್ವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳೆದ 5 ದಿನಗಳಿಂದ ಮಠಕ್ಕೆ ಸಹಸ್ರಾರು ಭಕ್ತರು ಬಂದು ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ಭಕ್ತರಿಗಾಗಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಸಂಜೆ ಮಠದ ಭಕ್ತಾದಿಗಳು ರಥವನ್ನು ಸಿಂಗರಿಸಿ ಪೂಜೆಯನ್ನು ಸಲ್ಲಿಸಿದರು. ನಂತರ ಅದ್ದೂರಿಯಾಗಿ ಜೋಡಿ ರಥೋತ್ಸವ ಕಾರ್ಯಕ್ರಮ ಜರುಗಿತು.</p>.<p>ಜ.31ರ ಶನಿವಾರದಂದು ಬೆಳಿಗ್ಗೆ 6 ಗಂಟೆಗೆ ಶಿವಯೋಗಿಗಳ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, 8 ಗಂಟೆಗೆ ಪಂಚಾಚಾರ್ಯರ ಧ್ವಜಾರೋಹಣ, ಜಾನುವಾರು ಜಾತ್ರೆ ಉದ್ಘಾಟನೆ, 11 ಗಂಟೆಗೆ ಉಚಿತ ಸಾಮೂಹಿಕ ವಿವಾಹ ಜರುಗಿದವು. ಸಂಜೆ ಶ್ರೀ ವೀರಭದ್ರೇಶ್ವರ ಪಲ್ಲಕ್ಕಿಯೊಂದಿಗೆ ಪಟ್ಟದಪುರವಂತರ ಆಗಮನ, ನಂತರ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಹಿಳಾ ಗೋಷ್ಠಿ ಜರುಗಿದವು.</p>.<p>ಸಂಜೆ 6 ಗಂಟೆಗೆ ಸೋಲಾಪುರ ಭಕ್ತರ ನಂದಿಕೋಲು ಮೆರವಣಿಗೆಯೊಂದಿಗೆ ಮಹಾಂತೇಶ್ವರರ ಭವ್ಯ ರಥೋತ್ಸವ ಜರುಗಿತು. ಮಹಾಂತ ಜ್ಯೋತಿ ಆಯುರ್ವೇದಿಕ ಆಸ್ಪತ್ರೆ ವತಿಯಿಂದ ಉಚಿತ ತಪಾಸಣಾ ಶಿಬಿರ ಜರುಗಿತು. ರಥೋತ್ಸವ ನಂತರ ಮದ್ದು ಸುಡುವ ಕಾರ್ಯಕ್ರಮ ಜರುಗಿತು. </p>.<p>ಕಾಯಕಯೋಗಿ ಶ್ರೀ ಸಿದ್ದರಾಮ ಶಿವಯೋಗಿಗಳ ಸಂಕಲ್ಪದಂತೆ ಉತ್ತಮ ಜಾನುವಾರುಗಳಿಗೆ ಬಹುಮಾನ ವಿತರಣೆ, ರಾತ್ರಿಯಿಡೀ ಖ್ಯಾತ ಸಂಗೀತ ಕಲಾವಿದರಿಂದ ಕಡಕೋಳ ಮಡಿವಾಳಪ್ಪನವರ ಹಾಡುಗಳ ಸಂಗೀತ ಕಾರ್ಯಕ್ರಮ ಜರುಗಿತು. ಜಾತ್ರಾ ಮಹೋತ್ಸವಕ್ಕೆ ದೇವಲ ಗಾಣಗಾಪುರ ಪೊಲೀಸ್ ಠಾಣೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>