<p>ಅಫಜಲಪುರ: ತಾಲ್ಲೂಕಿನ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಠಾಣೆ ವತಿಯಿಂದ ರಾಷ್ಟ್ರೀಯ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ’ ಆಯೋಜಿಸಲಾಗಿತ್ತು.</p>.<p>ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ವಿಶ್ವನಾಥ ಕಾಮರೆಡ್ಡಿ ಹಾಗೂ ತಂಡ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡಗಳನ್ನು ಹೇಗೆ ತಡೆಗಟ್ಟಬೇಕು, ಅಗ್ನಿ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗ್ನಿಶಾಮಕ ಉಪಕರಣಗಳ ಬಳಕೆ ಕುರಿತು ಪ್ರಾಯೋಗಿಕ ಪ್ರದರ್ಶನ ನೀಡಿದರು.</p>.<p>ವಿದ್ಯಾರ್ಥಿಗಳು ಅಗ್ನಿ ಸುರಕ್ಷತೆಯ ಮಹತ್ವವನ್ನು ಅರಿತುಕೊಂಡು, ತುರ್ತು ಸಂದರ್ಭಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಬಗ್ಗೆ ಮಾರ್ಗದರ್ಶನ ಪಡೆದರು. ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು.</p>.<p>ಈ ಸಂದರ್ಭದಲ್ಲಿ ಪ್ರಕಾಶ ಮೇತ್ರಿ ನಾಗಯ್ಯ ಎಂ., ಜಗದೇವಪ್ಪ ರಾಜಶೇಖರ, ಮಹಾಂತೇಶ, ಶರಣಪ್ರಮೋದ ಸಂಸ್ಥೆ ಅಧ್ಯಕ್ಷ ಮಹಾದೇವಪ್ಪ ಕರೂಟಿ, ಸದಸ್ಯರಾದ ಶಿವಶರಣಪ್ಪ ರೋಡಗಿ, ಮಲ್ಲನಗೌಡ ಬಗಲಿ, ಆಡಳಿತಾಧಿಕಾರಿ ಗುರುರಾಜ ಕೆಂದೂರ, ಪ್ರಾಚಾರ್ಯೆ ಭಾಗ್ಯಜ್ಯೋತಿ ಎಚ್. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-31-81824702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ತಾಲ್ಲೂಕಿನ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಠಾಣೆ ವತಿಯಿಂದ ರಾಷ್ಟ್ರೀಯ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ’ ಆಯೋಜಿಸಲಾಗಿತ್ತು.</p>.<p>ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ವಿಶ್ವನಾಥ ಕಾಮರೆಡ್ಡಿ ಹಾಗೂ ತಂಡ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡಗಳನ್ನು ಹೇಗೆ ತಡೆಗಟ್ಟಬೇಕು, ಅಗ್ನಿ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗ್ನಿಶಾಮಕ ಉಪಕರಣಗಳ ಬಳಕೆ ಕುರಿತು ಪ್ರಾಯೋಗಿಕ ಪ್ರದರ್ಶನ ನೀಡಿದರು.</p>.<p>ವಿದ್ಯಾರ್ಥಿಗಳು ಅಗ್ನಿ ಸುರಕ್ಷತೆಯ ಮಹತ್ವವನ್ನು ಅರಿತುಕೊಂಡು, ತುರ್ತು ಸಂದರ್ಭಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಬಗ್ಗೆ ಮಾರ್ಗದರ್ಶನ ಪಡೆದರು. ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು.</p>.<p>ಈ ಸಂದರ್ಭದಲ್ಲಿ ಪ್ರಕಾಶ ಮೇತ್ರಿ ನಾಗಯ್ಯ ಎಂ., ಜಗದೇವಪ್ಪ ರಾಜಶೇಖರ, ಮಹಾಂತೇಶ, ಶರಣಪ್ರಮೋದ ಸಂಸ್ಥೆ ಅಧ್ಯಕ್ಷ ಮಹಾದೇವಪ್ಪ ಕರೂಟಿ, ಸದಸ್ಯರಾದ ಶಿವಶರಣಪ್ಪ ರೋಡಗಿ, ಮಲ್ಲನಗೌಡ ಬಗಲಿ, ಆಡಳಿತಾಧಿಕಾರಿ ಗುರುರಾಜ ಕೆಂದೂರ, ಪ್ರಾಚಾರ್ಯೆ ಭಾಗ್ಯಜ್ಯೋತಿ ಎಚ್. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-31-81824702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>