<p><strong>ಅಫಜಲಪುರ:</strong> ಶನಿವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಪಟ್ಟಣದ ಮಹಮ್ಮದ್ ಸಲೀಮುದ್ದೀನ್ ಮುಜಾವರ್ ಅವರ ಕರ್ನಾಟಕ ಆಟೊಮೊಬೈಲ್ ಗ್ಯಾರೇಜ್ಗೆ ಬೆಂಕಿ ಹತ್ತಿದ್ದು ವಾಹನಗಳ ಬಿಡಿ ಭಾಗಗಳು ಸುಟ್ಟಿವೆ. </p>.<p>ಶನಿವಾರ ಬೆಳ್ಳಿಗೆ 8 ಗಂಟೆಗೆ ಆಟೊಮೊಬೈಲ್ ಗ್ಯಾರೇಜ್ಗೆ ಬೆಂಕಿ ಹತ್ತಿದ್ದನ್ನು ಗಮನಿಸಿದ ಸ್ಥಳೀಯರು ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅವರು ಬರುವುದರೊಳಗೆ ಬಹುತೇಕ ವಾಹನ ಬಿಡಿ ಭಾಗಗಳು ಸುಟ್ಟು ಹೋಗಿದ್ದವು. ಬಳಿಕ ಅಗ್ನಿಶಾಮಕ ಸಿಬ್ಬಂದಿಯ ಬಂದು ಬೆಂಕಿ ನಂದಿಸಲು ಪ್ರಯತ್ನ ಮಾಡಿದರು.</p>.<p>‘ನಮಗೆ ಬೇಗನೆ ಮಾಹಿತಿ ನೀಡಿದ್ದರೆ ಹೆಚ್ಚಿನ ಹಾನಿಯನ್ನು ತಡೆಯಲು ಸಾಧ್ಯವಾಗುತ್ತಿತ್ತು’ ಅಗ್ನಿಶಾಮಕ ಕಚೇರಿಯ ಅಧಿಕಾರಿ ವಿಶ್ವನಾಥ್ ಮಾಹಿತಿ ನೀಡಿದರು.</p>.<p>ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನಮ್ಮ ಗ್ಯಾರೇಜ್ನಲ್ಲಿ ₹30 ಲಕ್ಷ ಮೌಲ್ಯದ ವಿವಿಧ ವಾಹನಗಳ ಬಿಡಿಭಾಗಗಳನ್ನು ಮಾರಾಟ ಮಾಡಲಾಗುತ್ತಿತ್ತು. ಘಟನೆಯಲ್ಲಿ ಸುಮಾರು ₹25 ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿವೆ. ನಮಗೆ ತುಂಬಾ ಹಾನಿಯಾಗಿದೆ ನಮ್ಮ ನೋವಿಗೆ ಸರ್ಕಾರ ಸ್ಪಂದಿಸಬೇಕು’ ಎಂದು ಗ್ಯಾರೇಜ್ ಮಾಲೀಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ಶನಿವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಪಟ್ಟಣದ ಮಹಮ್ಮದ್ ಸಲೀಮುದ್ದೀನ್ ಮುಜಾವರ್ ಅವರ ಕರ್ನಾಟಕ ಆಟೊಮೊಬೈಲ್ ಗ್ಯಾರೇಜ್ಗೆ ಬೆಂಕಿ ಹತ್ತಿದ್ದು ವಾಹನಗಳ ಬಿಡಿ ಭಾಗಗಳು ಸುಟ್ಟಿವೆ. </p>.<p>ಶನಿವಾರ ಬೆಳ್ಳಿಗೆ 8 ಗಂಟೆಗೆ ಆಟೊಮೊಬೈಲ್ ಗ್ಯಾರೇಜ್ಗೆ ಬೆಂಕಿ ಹತ್ತಿದ್ದನ್ನು ಗಮನಿಸಿದ ಸ್ಥಳೀಯರು ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅವರು ಬರುವುದರೊಳಗೆ ಬಹುತೇಕ ವಾಹನ ಬಿಡಿ ಭಾಗಗಳು ಸುಟ್ಟು ಹೋಗಿದ್ದವು. ಬಳಿಕ ಅಗ್ನಿಶಾಮಕ ಸಿಬ್ಬಂದಿಯ ಬಂದು ಬೆಂಕಿ ನಂದಿಸಲು ಪ್ರಯತ್ನ ಮಾಡಿದರು.</p>.<p>‘ನಮಗೆ ಬೇಗನೆ ಮಾಹಿತಿ ನೀಡಿದ್ದರೆ ಹೆಚ್ಚಿನ ಹಾನಿಯನ್ನು ತಡೆಯಲು ಸಾಧ್ಯವಾಗುತ್ತಿತ್ತು’ ಅಗ್ನಿಶಾಮಕ ಕಚೇರಿಯ ಅಧಿಕಾರಿ ವಿಶ್ವನಾಥ್ ಮಾಹಿತಿ ನೀಡಿದರು.</p>.<p>ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನಮ್ಮ ಗ್ಯಾರೇಜ್ನಲ್ಲಿ ₹30 ಲಕ್ಷ ಮೌಲ್ಯದ ವಿವಿಧ ವಾಹನಗಳ ಬಿಡಿಭಾಗಗಳನ್ನು ಮಾರಾಟ ಮಾಡಲಾಗುತ್ತಿತ್ತು. ಘಟನೆಯಲ್ಲಿ ಸುಮಾರು ₹25 ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿವೆ. ನಮಗೆ ತುಂಬಾ ಹಾನಿಯಾಗಿದೆ ನಮ್ಮ ನೋವಿಗೆ ಸರ್ಕಾರ ಸ್ಪಂದಿಸಬೇಕು’ ಎಂದು ಗ್ಯಾರೇಜ್ ಮಾಲೀಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>