<p><strong>ಅಫಜಲಪುರ</strong>: ತಾಲ್ಲೂಕಿನ ನೀಲೂರು-ಗುಡೂರು ರಸ್ತೆ ನಿರ್ಮಾಣ ಕಾಮಗಾರಿ ನಾಲ್ಕು ವರ್ಷ ಕಳೆದರೂ ಪೂರ್ಣಗೊಳ್ಳದೆ ಇರುವುದರಿಂದ ಸಂಬಂಧಪಟ್ಟವರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>2020-21ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೈಕ್ರೋ ಯೋಜನೆಯಡಿ ₹2.57 ಕೋಟಿ ವೆಚ್ಚದಲ್ಲಿ 2.5 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಗುತ್ತಿಗೆದಾರರು ಅಲ್ಪ ಪ್ರಮಾಣದ ಕಾಮಗಾರಿ ನಡೆಸಿ ಬಹುಪಾಲು ಬಿಲ್ ಎತ್ತಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ರಸ್ತೆ ಕಾಮಗಾರಿ ಅಪೂರ್ಣವಾಗಿರುವ ಪರಿಣಾಮ ವಿದ್ಯಾರ್ಥಿಗಳು, ರೈತರು ಹಾಗೂ ಗ್ರಾಮಸ್ಥರು ದಿನನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆ ದುಸ್ಥಿತಿಯಿಂದ ವಾಹನ ಸಂಚಾರ ಕಷ್ಟಕರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ನಡೆದಿರುವ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಬೇಕು ಹಾಗೂ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಆಡಳಿತ ಹಾಗೂ ಕೆಕೆಆರ್ಡಿಬಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಶರಣು ಹಾಳಮಳ್ಳಿ, ಭೀಮ ಬಡದಾಳ, ವಿಶ್ವನಾಥ ಅಷ್ಟಗಿ, ರವೀಂದ್ರ ಮಡಿವಾಳ, ಮಂಜುನಾಥ ಹೊಸಗೌಡರ, ಮಾಂತೇಶ ಹೂಗಾರ್, ಮಹಾನಿಂಗಪ್ಪ ನಾಯ್ಕೋಡಿ, ಶಿವಕುಮಾರ ಲೋನಿ, ಸೈಬಣ್ಣ ಮುಗುದಿ ಹಾಗೂ ಸದಾನಂದ ಹೂಗಾರ್ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-31-579953637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ</strong>: ತಾಲ್ಲೂಕಿನ ನೀಲೂರು-ಗುಡೂರು ರಸ್ತೆ ನಿರ್ಮಾಣ ಕಾಮಗಾರಿ ನಾಲ್ಕು ವರ್ಷ ಕಳೆದರೂ ಪೂರ್ಣಗೊಳ್ಳದೆ ಇರುವುದರಿಂದ ಸಂಬಂಧಪಟ್ಟವರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>2020-21ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೈಕ್ರೋ ಯೋಜನೆಯಡಿ ₹2.57 ಕೋಟಿ ವೆಚ್ಚದಲ್ಲಿ 2.5 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಗುತ್ತಿಗೆದಾರರು ಅಲ್ಪ ಪ್ರಮಾಣದ ಕಾಮಗಾರಿ ನಡೆಸಿ ಬಹುಪಾಲು ಬಿಲ್ ಎತ್ತಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ರಸ್ತೆ ಕಾಮಗಾರಿ ಅಪೂರ್ಣವಾಗಿರುವ ಪರಿಣಾಮ ವಿದ್ಯಾರ್ಥಿಗಳು, ರೈತರು ಹಾಗೂ ಗ್ರಾಮಸ್ಥರು ದಿನನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆ ದುಸ್ಥಿತಿಯಿಂದ ವಾಹನ ಸಂಚಾರ ಕಷ್ಟಕರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ನಡೆದಿರುವ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಬೇಕು ಹಾಗೂ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಆಡಳಿತ ಹಾಗೂ ಕೆಕೆಆರ್ಡಿಬಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಶರಣು ಹಾಳಮಳ್ಳಿ, ಭೀಮ ಬಡದಾಳ, ವಿಶ್ವನಾಥ ಅಷ್ಟಗಿ, ರವೀಂದ್ರ ಮಡಿವಾಳ, ಮಂಜುನಾಥ ಹೊಸಗೌಡರ, ಮಾಂತೇಶ ಹೂಗಾರ್, ಮಹಾನಿಂಗಪ್ಪ ನಾಯ್ಕೋಡಿ, ಶಿವಕುಮಾರ ಲೋನಿ, ಸೈಬಣ್ಣ ಮುಗುದಿ ಹಾಗೂ ಸದಾನಂದ ಹೂಗಾರ್ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-31-579953637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>