<p><strong>ಅಫಜಲಪುರ:</strong> ತಾಲ್ಲೂಕಿನ ಬಳ್ಳೂರಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಪಾಯಿಯಾಗಿ ಕೆಲಸ ಮಾಡುತ್ತಿರುವ ಚಾಂದಸಾಬ್ ಶೇಕ್ ಅವರಿಗೆ ಮೂರು ವರ್ಷಗಳಿಂದ ಸಂಬಳ ಆಗಿಲ್ಲ!.</p>.<p>ಚಾಂದಸಾಬ್ ಶೇಕ್ ಅವರಿಗೆ ಕೆಲ ದಿನಗಳ ಹಿಂದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ,‘ತೆರಿಗೆ ಸಂಗ್ರಹ ಮಾಡಿದರೆ ಸಂಬಳ ನೀಡಲಾಗುವುದು’ ಎಂದು ಹೇಳಿದ್ದರು. ಆಗ ಚಾಂದಸಾಬ್ ಅವರು, ಬಿಲ್ ಕಲೆಕ್ಟರ್ ಆಗಿ ₹7 ಲಕ್ಷ ತೆರಿಗೆ ಸಂಗ್ರಹ ಮಾಡಿದ್ದರು. ಆದರೂ ಈವರೆಗೆ ಅವರಿಗೆ ಸಂಬಳ ನೀಡಿಲ್ಲ.</p>.<p>ಸಂಬಳ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪಿಡಿಒ ವರ್ಗಾವಣೆಯಾಗಿ ಬೇರೆ ಪಂಚಾಯಿತಿಗೆ ಹೋಗಿದ್ದಾರೆ. ಹೊಸದಾಗಿ ಬಂದಿರುವ ಪಿಡಿಒ ಸಂತೋಷ ಭೂಸನೂರ ಅವರು,‘ಸಂಬಳ ನೀಡಲು ಪಂಚಾಯಿತಿಯಲ್ಲಿ ಯಾವುದೇ ಅನುದಾನ ಇಲ್ಲ’ ಎಂದು ಹೇಳುತ್ತಾರೆ ಎಂದು ಸಿಪಾಯಿ ಅಳಲು ತೋಡಿಕೊಂಡರು.</p>.<p>‘ಈ ಹಿಂದೆ ಪಿಡಿಒ ಆಗಿ ಕಾರ್ಯನಿರ್ವಹಿಸಿದ್ದ ಹಿಟ್ಟನಹಳ್ಳಿ ಅವರು ಗ್ರಾಮ ಪಂಚಾಯಿತಿ ಕಡತಗಳನ್ನ ಹೊಸ ಪಿಡಿಒ ಅವರಿಗೆ ನೀಡದೆ ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ತಾ.ಪಂ ಇಒ ಆಗಲಿ ಅಥವಾ ಮೇಲಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಏಳು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಅನೇಕ ಸಿಬ್ಬಂದಿಗೆ ಸಂಬಳ ಆಗಿಲ್ಲ. ಯಾವುದೇ ಅಭಿವೃದ್ಧಿ ಕೆಲಸಗಳನ್ನೂ ಮಾಡಿಲ್ಲ. ತೆರಿಗೆ ಹಣ ಎಲ್ಲಿ ಹೋಯಿತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.</p>.<p>‘ನಾನು ಹೊಸದಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಹಿಂದಿನ ಪಿಡಿಒ ಅವರು ಏನು ಮಾಡಿದ್ದಾರೆ ಗೊತ್ತಿಲ್ಲ. ಜವಾನರಾಗಿ ಕಾರ್ಯನಿರ್ವಹಿಸುತ್ತಿರುವ ಚಾಂದಸಾಬ್ ಅವರಿಗೆ ವಾರದಲ್ಲಿ ನಾಲ್ಕು ತಿಂಗಳ ಸಂಬಳ ನೀಡಲಾಗುವುದು’ ಎಂದು ಪಿಡಿಒ ಸಂತೋಷ ಭೂಸನೂರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ಬಳ್ಳೂರಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಪಾಯಿಯಾಗಿ ಕೆಲಸ ಮಾಡುತ್ತಿರುವ ಚಾಂದಸಾಬ್ ಶೇಕ್ ಅವರಿಗೆ ಮೂರು ವರ್ಷಗಳಿಂದ ಸಂಬಳ ಆಗಿಲ್ಲ!.</p>.<p>ಚಾಂದಸಾಬ್ ಶೇಕ್ ಅವರಿಗೆ ಕೆಲ ದಿನಗಳ ಹಿಂದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ,‘ತೆರಿಗೆ ಸಂಗ್ರಹ ಮಾಡಿದರೆ ಸಂಬಳ ನೀಡಲಾಗುವುದು’ ಎಂದು ಹೇಳಿದ್ದರು. ಆಗ ಚಾಂದಸಾಬ್ ಅವರು, ಬಿಲ್ ಕಲೆಕ್ಟರ್ ಆಗಿ ₹7 ಲಕ್ಷ ತೆರಿಗೆ ಸಂಗ್ರಹ ಮಾಡಿದ್ದರು. ಆದರೂ ಈವರೆಗೆ ಅವರಿಗೆ ಸಂಬಳ ನೀಡಿಲ್ಲ.</p>.<p>ಸಂಬಳ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪಿಡಿಒ ವರ್ಗಾವಣೆಯಾಗಿ ಬೇರೆ ಪಂಚಾಯಿತಿಗೆ ಹೋಗಿದ್ದಾರೆ. ಹೊಸದಾಗಿ ಬಂದಿರುವ ಪಿಡಿಒ ಸಂತೋಷ ಭೂಸನೂರ ಅವರು,‘ಸಂಬಳ ನೀಡಲು ಪಂಚಾಯಿತಿಯಲ್ಲಿ ಯಾವುದೇ ಅನುದಾನ ಇಲ್ಲ’ ಎಂದು ಹೇಳುತ್ತಾರೆ ಎಂದು ಸಿಪಾಯಿ ಅಳಲು ತೋಡಿಕೊಂಡರು.</p>.<p>‘ಈ ಹಿಂದೆ ಪಿಡಿಒ ಆಗಿ ಕಾರ್ಯನಿರ್ವಹಿಸಿದ್ದ ಹಿಟ್ಟನಹಳ್ಳಿ ಅವರು ಗ್ರಾಮ ಪಂಚಾಯಿತಿ ಕಡತಗಳನ್ನ ಹೊಸ ಪಿಡಿಒ ಅವರಿಗೆ ನೀಡದೆ ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ತಾ.ಪಂ ಇಒ ಆಗಲಿ ಅಥವಾ ಮೇಲಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಏಳು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಅನೇಕ ಸಿಬ್ಬಂದಿಗೆ ಸಂಬಳ ಆಗಿಲ್ಲ. ಯಾವುದೇ ಅಭಿವೃದ್ಧಿ ಕೆಲಸಗಳನ್ನೂ ಮಾಡಿಲ್ಲ. ತೆರಿಗೆ ಹಣ ಎಲ್ಲಿ ಹೋಯಿತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.</p>.<p>‘ನಾನು ಹೊಸದಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಹಿಂದಿನ ಪಿಡಿಒ ಅವರು ಏನು ಮಾಡಿದ್ದಾರೆ ಗೊತ್ತಿಲ್ಲ. ಜವಾನರಾಗಿ ಕಾರ್ಯನಿರ್ವಹಿಸುತ್ತಿರುವ ಚಾಂದಸಾಬ್ ಅವರಿಗೆ ವಾರದಲ್ಲಿ ನಾಲ್ಕು ತಿಂಗಳ ಸಂಬಳ ನೀಡಲಾಗುವುದು’ ಎಂದು ಪಿಡಿಒ ಸಂತೋಷ ಭೂಸನೂರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>