<p><strong>ಅಫಜಲಪುರ:</strong> ತಾಲ್ಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡು 8 ಎಕರೆ ಕಬ್ಬು ಸುಟ್ಟು ಕರಕಲಾಗಿದೆ.</p>.<p>ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಒಂದಕ್ಕೊಂದು ತಾಗಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಇದರಿಂದ ಗ್ರಾಮದ ಕಬ್ಬು ಬೆಳೆಗಾರರಾದ ಮದರ್ ಗುಡುಸಾಬ್ ಕುಮಸಗಿ ಹಾಗೂ ಅನಸರಮಾ ಗುಡುಸಾಬ್ ಕುಮಸಿಗಿ ಅವರಿಗೆ ಸೇರಿದ ತಲಾ 4 ಎಕರೆ ಕಬ್ಬು ಸುಟ್ಟು ಕರಕಲಾಗಿದೆ.</p>.<p>ಸುಮಾರು 10 ತಿಂಗಳು ಕಬ್ಬು ನಾಟಿ ಮಾಡಿ, ನಿರ್ವಹಣೆ ಮಾಡಿದ್ದೇನೆ. ಕಬ್ಬು ನಿರ್ವಹಣೆಗಾಗಿ ಸಾಲ ಮಾಡಿದ್ದೇನೆ. ಕಬ್ಬು ಕಟಾವು ಮಾಡಿ ಸಾಲು ತೀರಿಸಬೇಕು ಎಂದುಕೊಂಡಿದ್ದೆ. ಆದರೆ ಕಬ್ಬು ಸಂಪೂರ್ಣ ನಾಶವಾಗಿದೆ ಎಂದು ಕಬ್ಬು ಬೆಳೆಗಾರ ಅಲವತ್ತುಕೊಂಡರು.</p>.<p>ಎರಡು ದಿನಗಳಲ್ಲಿ ಕಬ್ಬು ಕಟಾವಿಗೆ ಸಿದ್ಧತೆ ಮಾಡಿದ್ದೆವು. ಆದರೆ ಕಬ್ಬು ಸುಟ್ಟು ಹೋಗಿದ್ದು, ರೈತರಿಗೆ ಹಾನಿಯಾಗಿದೆ. ಸುಟ್ಟ ಕಬ್ಬು ತಕ್ಷಣ ಕಟಾವುಗೊಳಿಸಿ, ಸಕ್ಕರೆ ಕಾರ್ಖಾನೆಯವರು ಸಾಗಾಣಿಕೆ ಮಾಡಿಕೊಳ್ಳಬೇಕು. ಹೊಲದ ಮಧ್ಯದಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬ ತೆರವುಗೊಳಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡು 8 ಎಕರೆ ಕಬ್ಬು ಸುಟ್ಟು ಕರಕಲಾಗಿದೆ.</p>.<p>ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಒಂದಕ್ಕೊಂದು ತಾಗಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಇದರಿಂದ ಗ್ರಾಮದ ಕಬ್ಬು ಬೆಳೆಗಾರರಾದ ಮದರ್ ಗುಡುಸಾಬ್ ಕುಮಸಗಿ ಹಾಗೂ ಅನಸರಮಾ ಗುಡುಸಾಬ್ ಕುಮಸಿಗಿ ಅವರಿಗೆ ಸೇರಿದ ತಲಾ 4 ಎಕರೆ ಕಬ್ಬು ಸುಟ್ಟು ಕರಕಲಾಗಿದೆ.</p>.<p>ಸುಮಾರು 10 ತಿಂಗಳು ಕಬ್ಬು ನಾಟಿ ಮಾಡಿ, ನಿರ್ವಹಣೆ ಮಾಡಿದ್ದೇನೆ. ಕಬ್ಬು ನಿರ್ವಹಣೆಗಾಗಿ ಸಾಲ ಮಾಡಿದ್ದೇನೆ. ಕಬ್ಬು ಕಟಾವು ಮಾಡಿ ಸಾಲು ತೀರಿಸಬೇಕು ಎಂದುಕೊಂಡಿದ್ದೆ. ಆದರೆ ಕಬ್ಬು ಸಂಪೂರ್ಣ ನಾಶವಾಗಿದೆ ಎಂದು ಕಬ್ಬು ಬೆಳೆಗಾರ ಅಲವತ್ತುಕೊಂಡರು.</p>.<p>ಎರಡು ದಿನಗಳಲ್ಲಿ ಕಬ್ಬು ಕಟಾವಿಗೆ ಸಿದ್ಧತೆ ಮಾಡಿದ್ದೆವು. ಆದರೆ ಕಬ್ಬು ಸುಟ್ಟು ಹೋಗಿದ್ದು, ರೈತರಿಗೆ ಹಾನಿಯಾಗಿದೆ. ಸುಟ್ಟ ಕಬ್ಬು ತಕ್ಷಣ ಕಟಾವುಗೊಳಿಸಿ, ಸಕ್ಕರೆ ಕಾರ್ಖಾನೆಯವರು ಸಾಗಾಣಿಕೆ ಮಾಡಿಕೊಳ್ಳಬೇಕು. ಹೊಲದ ಮಧ್ಯದಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬ ತೆರವುಗೊಳಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>