<p><strong>ಅಫಜಲಪುರ:</strong> ‘ವಿಶ್ವಕರ್ಮರು ಈ ನಾಡಿನ ವಾಸ್ತುಶಿಲ್ಪ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಈ ಸಮುದಾಯ ಕಾಯಕ ಜೀವಿಗಳು ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅಲ್ಲದೇ ರೈತರ ಉಳುಮೆಗೆ ಬೇಕಾದ ಎಲ್ಲಾ ಸಲಕರಣೆಗಳು ಮಾಡಿಕೊಡುತ್ತಾರೆ. ಹೀಗಾಗಿ ವಿಶ್ವಕರ್ಮರು ರೈತರ ಬೆನ್ನಲೆಬಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ. ಪಾಟೀಲ ತಿಳಿಸಿದರು.</p>.<p>ಪಟ್ಟಣದ ಶೆಟ್ಟಿ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡ ಶ್ರೀ ಪ್ರಣವ ನಿರಂಜನ ಸ್ವಾಮೀಜಿಯ 25ನೇ ವರ್ಧಂತಿ ರಜತ ಮಹೋತ್ಸವ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಠದ ಅಭಿವೃದ್ಧಿಗೆ ₹ 50 ಲಕ್ಷ ಅನುದಾನ ಕೇಳಿದ್ದಾರೆ ಈ ಕುರಿತು ಶಾಸಕರ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡುವೆ’ ಎಂದು ಬರವಸೆ ನೀಡಿದರು.</p>.<p>ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಹಾಗೂ ಸಮಾಜ ಸೇವಕ ಜೆ.ಎಂ.ಕೊರಬು ಮಾತನಾಡಿ, ‘ಭಾರತ ದೇಶಕ್ಕೆ ವಿಶ್ವಕರ್ಮರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ’ ಎಂದರು</p>.<p>ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರಾದ ಈರಣ್ಣ ಪಂಚಾಳ, ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಪ್ರಣವ ನಿರಂಜನ ಸ್ವಾಮೀಜಿ ಹಾಗೂ ಶಹಾಪುರದ ಏಕದಂಡಿಗಮಠದ ಕಾಳಹಸ್ತೇಂದ್ರ ಸ್ವಾಮೀಜಿ, ಸಿಂದಗಿಭೀಮಾಶಂಕರ ಮಠದ ದತ್ತಪ್ಪಯ್ಯ ಸ್ವಾಮೀಜಿ, ಅಫಜಲಪುರದ ವಿಶ್ವಕರ್ಮ ಮೂರುಝಾವಧೀಶ್ವರ ಮಠದ ಮೌನೇಶ್ವರ ಸ್ವಾಮೀಜಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ, ಲೋಹಿತ, ಪ್ರಭಾವತಿ ಮೇತ್ರಿ ಹಾಜರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾದನಗೈದ ಸಾಧಕರಿಗೆ ಸನ್ಮಾನ ಸಮಾರಂಭ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕರಾದ ಮೌನೇಶ ಬಡಿಗೇರ ಹಾಗೂ ಸೂರ್ಯಕಾಂತ ಬಡಿಗೇರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ವಿಶ್ವಕರ್ಮರು ಈ ನಾಡಿನ ವಾಸ್ತುಶಿಲ್ಪ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಈ ಸಮುದಾಯ ಕಾಯಕ ಜೀವಿಗಳು ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅಲ್ಲದೇ ರೈತರ ಉಳುಮೆಗೆ ಬೇಕಾದ ಎಲ್ಲಾ ಸಲಕರಣೆಗಳು ಮಾಡಿಕೊಡುತ್ತಾರೆ. ಹೀಗಾಗಿ ವಿಶ್ವಕರ್ಮರು ರೈತರ ಬೆನ್ನಲೆಬಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ. ಪಾಟೀಲ ತಿಳಿಸಿದರು.</p>.<p>ಪಟ್ಟಣದ ಶೆಟ್ಟಿ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡ ಶ್ರೀ ಪ್ರಣವ ನಿರಂಜನ ಸ್ವಾಮೀಜಿಯ 25ನೇ ವರ್ಧಂತಿ ರಜತ ಮಹೋತ್ಸವ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಠದ ಅಭಿವೃದ್ಧಿಗೆ ₹ 50 ಲಕ್ಷ ಅನುದಾನ ಕೇಳಿದ್ದಾರೆ ಈ ಕುರಿತು ಶಾಸಕರ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡುವೆ’ ಎಂದು ಬರವಸೆ ನೀಡಿದರು.</p>.<p>ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಹಾಗೂ ಸಮಾಜ ಸೇವಕ ಜೆ.ಎಂ.ಕೊರಬು ಮಾತನಾಡಿ, ‘ಭಾರತ ದೇಶಕ್ಕೆ ವಿಶ್ವಕರ್ಮರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ’ ಎಂದರು</p>.<p>ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರಾದ ಈರಣ್ಣ ಪಂಚಾಳ, ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಪ್ರಣವ ನಿರಂಜನ ಸ್ವಾಮೀಜಿ ಹಾಗೂ ಶಹಾಪುರದ ಏಕದಂಡಿಗಮಠದ ಕಾಳಹಸ್ತೇಂದ್ರ ಸ್ವಾಮೀಜಿ, ಸಿಂದಗಿಭೀಮಾಶಂಕರ ಮಠದ ದತ್ತಪ್ಪಯ್ಯ ಸ್ವಾಮೀಜಿ, ಅಫಜಲಪುರದ ವಿಶ್ವಕರ್ಮ ಮೂರುಝಾವಧೀಶ್ವರ ಮಠದ ಮೌನೇಶ್ವರ ಸ್ವಾಮೀಜಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ, ಲೋಹಿತ, ಪ್ರಭಾವತಿ ಮೇತ್ರಿ ಹಾಜರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾದನಗೈದ ಸಾಧಕರಿಗೆ ಸನ್ಮಾನ ಸಮಾರಂಭ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕರಾದ ಮೌನೇಶ ಬಡಿಗೇರ ಹಾಗೂ ಸೂರ್ಯಕಾಂತ ಬಡಿಗೇರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>