<p><strong>ಜೇವರ್ಗಿ</strong>: ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಯುವ ಕೃಷಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.</p>.<p>ಪಟ್ಟಣದ ಬುಗ್ಗಿ ಬಡಾವಣೆಯ ರಾಜು ರಂಗಪ್ಪ (21) ಮೃತ ಕೃಷಿ ಕಾರ್ಮಿಕ.</p>.<p>ಕಳೆದ 8 ದಿನಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ. ಯುವಕನ ಕುಟುಂಬಕ್ಕೆ ಯಾವುದೇ ಜಮೀನು ಇಲ್ಲ. ಕೃಷಿ ಕೂಲಿ ಮೇಲೆಯೇ ಇವರ ಜೀವನ ಸಾಗುತ್ತಿತ್ತು. ಯುವಕನ ಸಾವಿನಿಂದ ಕುಟುಂಬ ವರ್ಗ ಸಂಕಷ್ಟಕ್ಕೀಡಾಗಿದೆ.</p>.<p>ಪರಿಹಾರಕ್ಕೆ ಆಗ್ರಹ: ಮೃತ ರಾಜು ಕುಟುಂಬ ಬಡತನದ ವೇದನೆಯಲ್ಲಿದ್ದು, ಸರ್ಕಾರ ₹5 ಲಕ್ಷ ಪರಿಹಾರ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀಂದ್ರ ಇಜೇರಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ</strong>: ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಯುವ ಕೃಷಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.</p>.<p>ಪಟ್ಟಣದ ಬುಗ್ಗಿ ಬಡಾವಣೆಯ ರಾಜು ರಂಗಪ್ಪ (21) ಮೃತ ಕೃಷಿ ಕಾರ್ಮಿಕ.</p>.<p>ಕಳೆದ 8 ದಿನಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ. ಯುವಕನ ಕುಟುಂಬಕ್ಕೆ ಯಾವುದೇ ಜಮೀನು ಇಲ್ಲ. ಕೃಷಿ ಕೂಲಿ ಮೇಲೆಯೇ ಇವರ ಜೀವನ ಸಾಗುತ್ತಿತ್ತು. ಯುವಕನ ಸಾವಿನಿಂದ ಕುಟುಂಬ ವರ್ಗ ಸಂಕಷ್ಟಕ್ಕೀಡಾಗಿದೆ.</p>.<p>ಪರಿಹಾರಕ್ಕೆ ಆಗ್ರಹ: ಮೃತ ರಾಜು ಕುಟುಂಬ ಬಡತನದ ವೇದನೆಯಲ್ಲಿದ್ದು, ಸರ್ಕಾರ ₹5 ಲಕ್ಷ ಪರಿಹಾರ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀಂದ್ರ ಇಜೇರಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>