ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿನಾಥ ಸಿಂಘೆ ಹಾಗೂ ಕಾರ್ಯದರ್ಶಿ ಹನುಮಂತ ಎಸ್.ಎಚ್., ‘ರೈಲು ವಿಳಂಬವಾಗಿದ್ದರಿಂದ ವಿದ್ಯಾರ್ಥಿಗಳು, ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೇ ತಮ್ಮ ಭವಿಷ್ಯದ ಬಗ್ಗೆ ಆತಂಕ ಎದುರಿಸುವಂತಾಗಿದೆ. ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರ ಒಂದನ್ನು ಏಕಾಏಕಿ 30 ಕಿ.ಮೀ. ದೂರದಲ್ಲಿರುವ ಮತ್ತೊಂದು ಕಡೆ ಸ್ಥಳಾಂತರ ಮಾಡಿದ್ದರಿಂದ ಅನೇಕ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರವನ್ನು ತಲುಪದೆ, ಉತ್ತಮ ರೀತಿಯಲ್ಲಿ ನೀಟ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗಲಿಲ್ಲ. ತಮ್ಮದಲ್ಲದ ತಪ್ಪಿನಿಂದಾಗಿ ನೀಟ್ ಪರೀಕ್ಷೆ ಅವಕಾಶ ವಂಚಿತ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಅವಕಾಶ ನೀಡಬೇಕು’ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.