‘ಬಿಜೆಪಿ ಹಾಗೂ ಆರ್ಎಸ್ಎಸ್ ಸಿದ್ಧಾಂತಕ್ಕೆ ಪೂರಕವಾಗಿರುವ ಸಂಘಟನೆಗಳ ಅಭಿಪ್ರಾಯ ಪಡೆದುಕೊಳ್ಳಲಾಗಿದೆ. ಪ್ರಜಾತಾಂತ್ರಿಕ ವ್ಯವಸ್ಥೆಯನ್ನು ಕೈಬಿಡಲಾಗಿದೆ. ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವಂಥ ಶಿಕ್ಷಣದಲ್ಲಿ ಜ್ಯೋತಿಭಾ ಫುಲೆ, ಈಶ್ವರಚಂದ್ರ ವಿದ್ಯಾಸಾಗರ, ಭಗತ್ ಸಿಂಗ್, ನೇತಾಜಿ ಸುಭಾಷಚಂದ್ರ ಭೋಸ್, ಚಂದ್ರಶೇಖರ ಆಜಾದ್ ಮೊದಲಾದವರ ಹೆಸರುಗಳಿಲ್ಲ. ಹೀಗಿರುವಾಗ ಇದು ಪರಿಪೂರ್ಣ ಶಿಕ್ಷಣ ಆಗಲು ಸಾಧ್ಯವಿಲ್ಲ’ ಎಂದೂ ಅವರು ದೂರಿದರು.