ನ 28ರಂದು ಪ್ರತಿನಿಧಿಗಳ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆ ಮತ್ತು ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು. ಪ್ರಸಕ್ತ ರಾಜಕೀಯ, ಸಾಮಾಜಿಕ ಪರಿಸ್ಥಿತಿ ಮತ್ತು ಸಂಘಟನಾತ್ಮಕ ವರದಿ ಮಂಡಿಸಲಾಗುವುದು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ–ಹೊರ ಗುತ್ತಿಗೆ ಪದ್ಧತಿ ಕೈ ಬಿಟ್ಟು ಕಾಯಂ ಭರ್ತಿ ಮಾಡಲು ಮುಂದಾಗಬೇಕು. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗುತ್ತಿರುವ ಅಶ್ಲೀಲತೆ, ಕುಸಂಸ್ಕ್ರತಿಯನ್ನು ಹರಡುವ ಸಿನಿಮಾ ಸಾಹಿತ್ಯ ಹಾಗೂ ಮದ್ಯಪಾನ ಸಂಪೂರ್ಣವಾಗಿ ನಿಷೇಧಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಬೆಲೆ ಏರಿಕೆ ನಿಯಂತ್ರಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನ ಗೊಳಿಸಬೇಕು. ಒಂದು ಕುಟುಂಬಕ್ಕೆ ವಾರ್ಷಿಕ ಕನಿಷ್ಠ 200 ಮಾನವ ದಿನಗಳು ಉದ್ಯೋಗ ಖಾತ್ರಿಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದ್ದಾರೆ.