ಮೃತ ದೇಹದ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಹಿಳೆಯ ಖಾಸಗಿ ಭಾಗಗಳಿಗೆ ಗಾಯವಾಗಿದೆ ಹಾಗೂ ಒಂದು ಕಾಲು ಮುರಿದಿದೆ. ಮರ್ಮಾಂಗಕ್ಕೆ ಕಬ್ಬಿಣದ ಸರಳುಗಳನ್ನು ತುರುಕಲಾಗಿದೆ ಮತ್ತು ನೋವಿನಿಂದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಕುತ್ತಿಗೆಯೂ ಮುರಿದಿದೆ ಎಂದು ಉಲ್ಲೇಖಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಇದು ಅತ್ಯಾಚಾರದ ಪ್ರಕರಣ ಎಂಬುದಾಗಿ ವೈದ್ಯಾಧಿಕಾರಿಗಳು ಧೃಡಪಡಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆಯುವ ಸ್ಥಿತಿಯಲ್ಲಿದ್ದ ಆಕೆಯ ಬಗ್ಗೆ ಕುಟುಂಬಸ್ಥರು ದೂರು ದಾಖಲಿಸಿದ ನಂತರವೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿರಲಿಲ್ಲ. ಒಟ್ಟಾರೆ ಈ ಹಿಂದೆ ನಡೆದ ಘಟನೆಗಳಂತೆಯೇ ಆಡಳಿತ ಯಂತ್ರದ ನಿಷ್ಕ್ರಿಯತೆ, ನಿರ್ಲಕ್ಷ್ಯ ಎದ್ದು ಕಾಣುತ್ತದೆ. ಅತ್ಯಾಚಾರ ಸಂತ್ರಸ್ತೆಯ ನೋವಿಗೆ ಕುಟುಂಬಸ್ಥರ ಆಗ್ರಹಕ್ಕೆ ಮನ್ನಣೆ ನೀಡದೆ, ನ್ಯಾಯ ವಿಳಂಬವಾಗುವ ರೀತಿಯಲ್ಲಿ ಅಪರಾಧಿಗಳಿಗೆ ಪರಾರಿಯಾಗಲು ಅವಕಾಶ ಮಾಡಿಕೊಡಲಾಗಿದೆ’ ಎಂದು ಟೀಕಿಸಿದ್ದಾರೆ.