ಯೋಜನೆಗೆ ಮಂಜೂರಾತಿ ನೀಡಬೇಕೆಂದು ಒತ್ತಾಯಿಸಿ ಹಾಲಿ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಶಾಸಕರು, ಜಿಲ್ಲಾ ಉಸ್ತುವಾರಿ ಹಾಲಿ ಮಾಜಿ ಸಚಿವರು ಹಾಗೂ ನೀರಾವರಿ ನಿಗಮದ ಮತ್ತು ಜಲ ಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕಳೆದ 10 ವರ್ಷಗಳಿಂದ ರೈತರು ಯೋಜನೆ ಅನುಷ್ಠಾನಕ್ಕೆ ಹೋರಾಟ ನಡೆಸುತ್ತಿದ್ದಾರೆ.