ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಂದೋಲಾದ ಸಿದ್ದಲಿಂಗ ಸ್ವಾಮೀಜಿ, ‘ಮಾ.8ರಂದು ಶ್ರೀರಾಮ ಸೇನೆ ಮತ್ತು ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಪೂಜೆ ನಡೆಯಲಿದೆ, ರಾಘವ ಚೈತನ್ಯಲಿಂಗದ ಸುತ್ತಲು ದುಸ್ಥಿತಿ ಇದೆ. ಅದೇ ಸ್ಥಳದ ಜೀರ್ಣೋದ್ದಾರ ಕಾರ್ಯಕ್ಕೆ ಮಂದಿರ ನಿರ್ಮಾಣದ ಸಂಕಲ್ಪದಿಂದ ಈ ಭಾಗದ ಮಠಧೀಶರು, ಹಿಂದೂ ಸಂಘಟನೆಗಳ ಮುಖಂಡರು ಭಾಗಿಯಾಗಿ ಶಂಕುಸ್ಥಾಪನೆ ಕಾರ್ಯ ಮಾಡುತ್ತೇವೆ. ಪುರಸಭೆಯು ಮಂದಿರ ನಿರ್ಮಾಣಕ್ಕೆ ಕಾನೂನು ಅನ್ವಯ ಅನುಮತಿ ನೀಡಬೇಕು’ ತಿಳಿಸಿದರು.